- Advertisement -
- Advertisement -
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಕರಾಯ ಸರಕಾರಿ ಉನ್ನತೀಕರಿಸಿದ ಶಾಲೆಯ ಆವರಣದಲ್ಲಿನ ಬೆಲೆಬಾಳುವ ಮರಗಳನ್ನು ಕಳ್ಳರು ಕಳವುಗೈದಿದ್ದಾರೆ.
ಬೆಳ್ತಂಗಡಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಗೆ ತಾಗಿಕೊಂಡಿದ್ದು, ಕೂಗಳತೆ ದೂರದಲ್ಲಿದ್ದು ಹತ್ತಕ್ಕೂ ಮಿಕ್ಕ ಮರಗಳನ್ನು ಶಾಲೆ ರಜೆಯ ದಿನಗಳಂದು ಕಡಿದು ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
ಪುತ್ತೂರು ಉಪವಿಭಾಗಧಿಕಾರಿಗಳಿಗೆ ಖಚಿತ ಮಾಹಿತಿ ತಿಳಿದ ಮೇರೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.
ಇನ್ನು ಈ ಮರಗಳನ್ನು ಶಾಲಾಭಿವೃದ್ಧಿ ಸಮಿತಿ ನೆಟ್ಟು ಬೆಳೆಸಿದ್ದು, ಮರಗಳನ್ನು ಪೀಠೊಪಕರಣಗಳ ರಚನೆಗಾಗಿ ಅವಕಾಶ ಕೇಳಿ ಮನವಿ ಸಲ್ಲಿಸಿದ್ದು, ಈಗಾಗಲೇ ಹಿರಿಯ ಅಧಿಕಾರಿಗಳ ಕಚೇರಿಯಲ್ಲಿ ಕಡತವಿತ್ತು. ಮರಗಳನ್ನು ಕಡಿಯಲು ಕೆಲವು ದಿನಗಳ ಹಿಂದೆ ಅರಣ್ಯ ಇಲಾಖೆಯವರು ಗುರುತು ಮಾಡಿ ಹೋಗಿದ್ದ
- Advertisement -