Saturday, April 20, 2024
Homeಕರಾವಳಿಬೆಳ್ತಂಗಡಿ : ಹಾವು ರಕ್ಷಣೆ ವೇಳೆ ಸ್ನೇಕ್ ಅಶೋಕ್‌ ಗೆ ಹಾವು ಕಡಿತ, ಗಂಭೀರ ಸ್ಥಿತಿಯಲ್ಲಿ...

ಬೆಳ್ತಂಗಡಿ : ಹಾವು ರಕ್ಷಣೆ ವೇಳೆ ಸ್ನೇಕ್ ಅಶೋಕ್‌ ಗೆ ಹಾವು ಕಡಿತ, ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಬೆಳ್ತಂಗಡಿ : ಮನೆಗೆ ಬಂದಿದ್ದ ಹಾವು ರಕ್ಷಣೆ ಮಾಡುವ ವೇಳೆ ನಾಗರ ಹಾವು ಕಚ್ಚಿ ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ಗಂಭೀರ ಸ್ಥಿತಿಯಲ್ಲಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬಳಿಯಲ್ಲಿ ಮಾ.25 ರಂದು ರಾತ್ರಿ ಸುಮಾರು 10 ಗಂಟೆ ವೇಳೆ ಮನೆಯಲ್ಲಿ ನಾಗರ ಹಾವು ಇರುವ ಬಗ್ಗೆ ಮಾಹಿತಿ ನೀಡಿದ್ದು ಅದರಂತೆ ರಕ್ಷಣೆ ಮಾಡಲು ಸ್ನೇಕ್ ಅಶೋಕ್ ಲಾಯಿಲ ಹಿಡಿಯುವಾಗ ಬಲ ಕಾಲಿಗೆ ನಾಗರ ಹಾವು ಕಚ್ಚಿದೆ.


ಘಟನೆ ಬಳಿಕ ನೇರ ಉಜಿರೆ ಬೆನಕ ಆಸ್ಪತ್ರೆಗೆ ಬಂದಿದ್ದು ಪರೀಕ್ಷಿಸಿದ ವೈದ್ಯರು ಮಂಗಳೂರು ಆಸ್ಪತ್ರೆಗೆ ರವಾನಿಸಲು ಸೂಚಿಸಿದ್ದಾರೆ. ಬಳಿಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಬಂದು ಪ್ರಥಮ ಚಿಕಿತ್ಸೆ ನೀಡಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಬಾ ಅಂಬುಲೆನ್ಸ್ ಚಾಲಕ ಜಲೀಲ್ ಮತ್ತು ಪ್ರತೀಕ್ ಕೋಟ್ಯಾನ್ ತಕ್ಷಣ ಮಂಗಳೂರು ಕಂಕನಾಡಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆಗೆ ದಾಖಲಿಸಿದ್ದಾರೆ.


ಸ್ನೇಕ್ ಅಶೋಕ್ ಲಾಯಿಲ ಗಂಭೀರ ಸ್ಥಿತಿಯಲ್ಲಿದ್ದು ಸದ್ಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ನೇಕ್ ಅಶೋಕ್ ಅವರಿಗೆ ಈ ಮೊದಲು ನಾಗರ ಹಾವು ಕಚ್ಚಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಪ್ರಸಿದ್ಧ ಹಾವು ರಕ್ಷಕರಲ್ಲಿ ಸ್ನೇಕ್ ಅಶೋಕ್ ಲಾಯಿಲ ಒಬ್ಬರಾಗಿದ್ದಾರೆ.

- Advertisement -
spot_img

Latest News

error: Content is protected !!