ಬೆಂಗಳೂರು: RSS ಹಾಗೂ ಬಿಜೆಪಿ ಮುಖಂಡರ ಹೆಸರು ಹೇಳಿ ವಂಚಿಸುತ್ತಿದ್ದ ಆರೋಪದ ಮೇಲೆ ಅರೆಸ್ಟ್ ಆಗಿರೋ ಯುವರಾಜ್ ಅಲಿಯಾಸ್ ಸ್ವಾಮಿಯ ಮಹಾವಂಚನೆ ಪ್ರಕರಣದಲ್ಲಿ ಸ್ಟಾರ್ ನಟಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರು ತಳುಕು ಹಾಕಿಕೊಂಡಿದೆ. ಈ ಹಿನ್ನೆಲೆ ರಾಧಿಕಾ ಕುಮಾರಸ್ವಾಮಿ ಸ್ಪಷ್ಟನೆ ನೀಡಲು ಮುಂದಾಗಿದ್ದಾರೆ.
ಸಿಸಿಬಿ ಕಸ್ಟಡಿಯಲ್ಲಿರುವ ಆರೋಪಿ ಯುವರಾಜ್, ಡೀಲ್ವೊಂದರ ಭಾಗವಾಗಿ ರಾಧಿಕಾ ಕುಮಾರಸ್ವಾಮಿ ಅವರ ಖಾತೆಗೆ ₹1.25 ಕೋಟಿಯನ್ನ ಜಮಾವಣೆ ಮಾಡಿದ್ದಾನೆ ಅಂತ ಆರೋಪಿಸಲಾಗಿದೆ. ಇದೇ ಪ್ರಕರಣ ಸಂಬಂಧ ಈಗಾಗಲೇ ರಾಧಿಕಾ ಅವರ ಸಹೋದರ ರವಿರಾಜ್ರನ್ನ ಸಿಸಿಬಿ ವಿಚಾರಣೆ ಮಾಡಿದೆ. ಈ ಹಿನ್ನೆಲೆ ರಾಧಿಕಾ ಇಂದು ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಟಿ ನಡೆಸಿ ತಮ್ಮ ಮೇಲೆ ಕೇಳಿಬಂದಿರುವ ಆರೋಪ ಸಂಬಂಧ ಸ್ಪಷ್ಟನೆ ನೀಡಲಿದ್ದಾರೆ.
ನಗರದ ಡಾಲರ್ಸ್ ಕಾಲೋನಿಯಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸುವ ಸಾಧ್ಯತೆ ಇದೆ. ಕಳೆದ 10 ದಿನಗಳಿಂದ ರಾಧಿಕಾ ಈ ನಿವಾಸಕ್ಕೆ ಬಂದಿಲ್ಲ ಎಂದು ಮನೆಯ ಕೆಲಸದ ಸಿಬ್ಬಂದಿ ಹೇಳಿದ್ದಾರೆ.