- Advertisement -
- Advertisement -
ಶಿವಮೊಗ್ಗ: ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ಶಂಕಿತ ಉಗ್ರರನ್ನು ಶಿವಮೊಗ್ಗದಲ್ಲಿ ಬಂಧಿಸಿದ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಬಂಧಿತರ ಶಂಕಿತರ ಸಂಖ್ಯೆ ಮೂರಕ್ಕೇರಿದ್ದು, ತಲೆಮರೆಸಿಕೊಂಡಿರುವ ಶಿವಮೊಗ್ಗ ಮೂಲದ ಮತ್ತೋರ್ವನ ಬಂಧನಕ್ಕೆ ತನಿಖೆ ಮುಂದುವರಿದಿದೆ.
ತೀರ್ಥಹಳ್ಳಿಯ ಭೂಗತ ಶಂಕಿತರ ಉಗ್ರ ಮತೀನ್ ತಲೆಮರೆಸಿಕೊಂಡು ಎರಡು ವರ್ಷಗಳು ಕಳೆದಿವೆ. ಈತನ ಸುಳಿವು ಇನ್ನೂ ಸಿಕ್ಕಿಲ್ಲ. ಈ ವ್ಯಕ್ತಿ ತೀರ್ಥಹಳ್ಳಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವುದು ಪತ್ತೆ ಆಗಿತ್ತು, ಸದ್ಯ ಈ ವ್ಯಕ್ತಿಯ ಬಂಧನಕ್ಕೆ ಎನ್ಐ ಮುಂದಾಗಿದೆ. ಅದರಂತೆ ಈತನ ಕುರಿತು ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಮತೀನ್ ತಮಿಳುನಾಡಿನ ಹಿಂದೂ ಕಾರ್ಯಕರ್ತನ ಹತ್ಯೆಯ ಆರೋಪಿ ಆಗಿದ್ದಾನೆ.
- Advertisement -