- Advertisement -
- Advertisement -
ಹಾಸನ: ಹೃದಯಾಘಾತದಿಂದ 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಕಾವ್ಯ ಎಂಬವರ ಪುತ್ರ ಸಚಿನ್ (10) ಮೃತ ಬಾಲಕ.
ನಿನ್ನೆ ಶಾಲೆಯಲ್ಲಿ ಸ್ವಲ್ಪ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಶಾಲೆಗೆ ಹೋಗದೇ ಮನೆಯಲ್ಲೇ ಇದ್ದ ಸಚಿನ್ ಎದೆನೋವಿನಿಂದ ಸಾವನ್ನಪ್ಪಿದ್ದಾನೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಆಲೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ಮುಂಚೆಯೇ ಸಚಿನ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಓ
- Advertisement -