ಕಾಬೂಲ್: ಅಫ್ಗಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಿಂದ ಭಾರತೀಯ ವಾಯುಪಡೆ ವಿಮಾನದ ಮೂಲಕ 107 ಭಾರತೀಯರು ಸೇರಿದಂತೆ 168 ಮಂದಿಯನ್ನು ಭಾನುವಾರ ಭಾರತಕ್ಕೆ ಕರೆತರಲಾಯಿತು.
107 ಮಂದಿ ಭಾರತೀಯರಲ್ಲಿ 6 ಮಂದಿ ಕನ್ನಡಿಗರೂ ಇದ್ದಾರೆ.ಇನ್ನು ಭಾರತಕ್ಕೆ ಕಾಲಿಡುತ್ತಿದ್ದಂತೆಯೇ ಅಪ್ಘಾನ್ ಸಂಸದ ಕಣ್ಣೀರಿಟ್ಟಿದ್ದಾರೆ.ಭಾರತೀಯ ವಾಯು ಸೇನೆಯ ಸಿ-17 ವಿಮಾನದ ಮೂಲಕ ಕಾಬೂಲ್ನಿಂದ ಹಿಂದನ್ ಏರ್ಪೋರ್ಸ್ ಬೇಸ್ನ ಗಾಜಿಯಾಬಾದ್ ಗೆ ಕರೆತರಲಾಗಿದೆ. ಇಂದು ಬೆಳಗ್ಗೆ107 ಜನ ಭಾರತೀಯರು ಸೇರಿ ಒಟ್ಟು 168 ಜನ ಭಾರತಕ್ಕೆ ಬಂದಿಳಿದಿದ್ದಾರೆ. ವಿದೇಶಾಂಗ ಸಚಿವಾಲಯದ ಅರಿಂದಮ್ ಬಾಗ್ಚಿ ಟ್ವೀಟ್ ಮೂಲಕ ಖಚಿತ ಪಡಿಸಿದ್ದಾರೆ.
ಅಪ್ಘಾನಿಸ್ತಾನದಲ್ಲಿ ಸಾವಿರಾರು ಮಂದಿ ಸಿಲುಕಿರುವ ಸಾಧ್ಯತೆಯಿದ್ದು, ಕೇಂದ್ರ ಸರಕಾರದ ಸೂಚನೆಯ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಕಾರ್ಯಾಚರಣೆಯನ್ನು ಕೈಗೊಂಡಿದೆ. ಅಲ್ಲದೇ ಅಪ್ಘಾನಿಸ್ತಾನದ ಹಲವು ಮಂದಿ ಇದೇ ವಿಮಾನದಲ್ಲಿ ಭಾರತಕ್ಕೆ ಬಂದಿದ್ದಾರೆ ಅದ್ರಲ್ಲೂಅಫ್ಘಾನಿಸ್ತಾನದ ಸಂಸದ ನರೇಂದ್ರ ಸಿಂಗ್ ಖಲ್ಸಾ ಅವರು ಕಾಬೂಲ್ನಿಂದ ಭಾರತಕ್ಕೆ ಲ್ಯಾಂಡ್ ಆಗುತ್ತಿದ್ದಂತೆ ಭಾವುರಾಗಿ ಕಣ್ಣೀರಿಟ್ಟಿದ್ದಾರೆ. ಕಳೆದ 20 ವರ್ಷಗಳಿಂದ ಸಂಪಾದಿಸಿದ್ದನ್ನೂ ಕಳೆದುಕೊಂಡಿದ್ದೇವೆ ಎಂದಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ತಾಲಿಬಾನಿಗಳು ತನ್ನ ಮನೆಯನ್ನು ಸುಟ್ಟು ಹಾಕಿದ್ದಾರೆ. ರಕ್ಷಣೆಗೆ ನಿಂತ ಭಾರತಕ್ಕೆ ನಾನು ಧನ್ಯವಾದ ಸಮರ್ಪಿಸುತ್ತೇನೆ ಎಂದು ಭಾರತಕ್ಕೆ ಬಂದ ಮಹಿಳೆ ಭಾವುಕರಾಗಿದ್ದಾರೆ.