ಬೆಂಗಳೂರು : ರಾಜ್ಯದಲ್ಲಿ 108 ಆಂಬ್ಯುಲೆನ್ಸ್ ಸೇವೆ ಪುನಾರಂಭವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ‘ಮದರ್ ಬೋರ್ಡ್ ನಲ್ಲಿ ತಾಂತ್ರಿಕ ಸಮಸ್ಯೆಯಾಗಿರುವ ಹಿನ್ನೆಲೆ 108-ಆಂಬ್ಯುಲೆನ್ಸ್ ಸೇವೆ ಸ್ಥಗಿತಗೊಂಡಿತ್ತು, ಈ ಕುರಿತು ಇದೀಗ ಸ್ಪಷ್ಟನೆ ನೀಡಿದ ಸಚಿವ ಡಾ.ಕೆ ಸುಧಾಕರ್ ಮಧ್ಯಾಹ್ನ 2 ಗಂಟೆಯಿಂದ ಬ್ಯಾಕಪ್ ಸರ್ವರ್ ಕೆಲಸ ಮಾಡುತ್ತಿದೆ. ಇದೀಗ ಆಂಬುಲೆನ್ಸ್ ಸೇವೆ ಸರಿಯಾಗಿದೆ , ಅಡಚಣೆಯಾಗಿದ್ದಕ್ಕೆ ಕ್ಷಮಿಸಿ’ ಎಂದು ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಮತ್ತೆ 108 ಆಂಬ್ಯುಲೆನ್ಸ್ ಸೇವೆ ಪುನಾರಂಭವಾಗಿದೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ. ಐಟಿ ಹಾರ್ಡ್ ವೇರ್ ವೈರಸ್ ತಾಂತ್ರಿಕ ಸಮಸ್ಯೆಯಿಂದ ತೊಂದರೆಯಾಗಿತ್ತು. ಶೀಘ್ರ ಹೊಸ ಮದರ್ ಬೋರ್ಡ್ ಅಳವಡಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಆಯಂಬುಲೆನ್ಸ್ ಸೇವೆ ವ್ಯತ್ಯಯವಾಗಿದ್ದಕ್ಕೆ ಕ್ಷಮೆಯಾಚಿಸುವೆ, ಮದರ್ ಬೋರ್ಡ್ ನಾಳೆ ಸರಿಯಾಗಲಿದೆ ಎಂದು ಹೇಳಿದ್ದಾರೆ. ಇನ್ನೊಂದು ಹೊಸ ಮದರ್ ಬೋರ್ಡ್ ಅಳವಡಿಸಿದರೆ ಎಲ್ಲಾ ಸರಿಯಾಗುತ್ತದೆ. ಸದ್ಯದಲ್ಲೇ ಹೊಸ ಮದರ್ ಬೋರ್ಡ್ ಅಳವಡಿಸುತ್ತೇವೆ ಎಂದು ಸಚಿವ ಡಾ,ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.