Sunday, June 29, 2025
Homeತಾಜಾ ಸುದ್ದಿಗೆಳಯರಿಂದ ನಿರಂತರ ಅವಮಾನ: ಮನನೊಂದು ಆತ್ಮಹತ್ಯೆಗೆ ಶರಣಾದ 10ನೇ ತರಗತಿ ವಿದ್ಯಾರ್ಥಿ

ಗೆಳಯರಿಂದ ನಿರಂತರ ಅವಮಾನ: ಮನನೊಂದು ಆತ್ಮಹತ್ಯೆಗೆ ಶರಣಾದ 10ನೇ ತರಗತಿ ವಿದ್ಯಾರ್ಥಿ

spot_img
- Advertisement -
- Advertisement -

ಹಾಸನ: ಗೆಳೆಯರಿಂದ ದಿನ ನಿತ್ಯ ಅವಮಾನಕ್ಕೆ ಒಳಗಾಗುತ್ತಿದ್ದ ವಿದ್ಯಾರ್ಥಿಯೊಬ್ಬ ಅದರಿಂದ ಮನನೊಂದು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹರ್ಷಿತ್ ಗೌಡ (16) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಹಾಸನ ತಾಲ್ಲೂಕಿನ ಕಂಚಮಾರನಹಳ್ಳಿ ಬಳಿಯ ಖಾಸಗಿ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದ ಹರ್ಷಿತ್ ಗೆ ಒಂದು ವರ್ಷದ ಹಿಂದೆ ಸ್ಟ್ರೋಕ್ ಆಗಿತ್ತು ಇದನ್ನೇ ಕಾರಣವಾಗಿಟ್ಟುಕೊಂಡ ಆತನ ಸಹಪಾಠಿಗಳು ಶಾಲೆಗೆ ಹೋದಾಗ ರೇಗಿಸುತ್ತಿದ್ದರಂತೆ. ಇದೇ ವಿಚಾರವಾಗಿ ಮಾರ್ಚ್19 ರಂದು ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ.

ಗಲಾಟೆ ವೇಳೆ ವಿದ್ಯಾರ್ಥಿಗಳಿಗೆ ಶಿಕ್ಷಕರು ಬುದ್ದಿಮಾತು ಕೂಡ ಹೇಳಿದ್ದರು. ಇದರಿಂದ ಬೇಸರಗೊಂಡ ಹರ್ಷಿತ್ ಶಾಲೆ ಬಿಟ್ಟು ತನ್ನ ಊರಿಗೆ ಹೋಗಿದ್ದನಂತೆ. ಮನೆಗೆ ತೆರಳಿದ ನಂತರ ಮನೆ ಕೆಲಸ ಮಾಡಿಕೊಂಡಿದ್ದ ಹರ್ಷಿತ್, ದನಗಳನ್ನು ಮೇಯಿಸಲು ಹೋದಾಗ ಜಮೀನಿನ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಈ ಘಟನೆ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!