- Advertisement -
- Advertisement -
ಮಂಗಳೂರು : ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ವಿದ್ಯಾರ್ಥಿನಿ ಕೋಪಗೊಂಡು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ನೀರುಮಾರ್ಗ ಸಮೀಪ ಪಾಲ್ದಾನೆಯಲ್ಲಿ ಮಂಗಳವಾರ ನಡೆದಿದೆ. ತೇಜತ್ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಎಸ್ಸೆಸೆಲ್ಸಿ ವ್ಯಾಸಂಗ ಮಾಡುತ್ತಿದ್ದ ತೇಜತ್ ಮಂಗಳವಾರ ಸಂಜೆ ಶಾಲೆಯಿಂದ ಬಂದ ಬಳಿಕ ಕ್ಷುಲ್ಲಕ ಕಾರಣಕ್ಕೆ ಮನೆಯವರ ಜತೆ ಜಗಳ ಮಾಡಿದ್ದಳು ಎನ್ನಲಾಗಿದೆ. ಬಳಿಕ ಅದೇ ಕೋಪದಿಂದ ಕೋಣೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -