Saturday, June 28, 2025
Homeಕರಾವಳಿಉಪ್ಪಿನಂಗಡಿ: ತೋಡಿಗೆ ಬಿದ್ದು 10ನೇ ತರಗತಿ ಬಾಲಕ ಸಾವು

ಉಪ್ಪಿನಂಗಡಿ: ತೋಡಿಗೆ ಬಿದ್ದು 10ನೇ ತರಗತಿ ಬಾಲಕ ಸಾವು

spot_img
- Advertisement -
- Advertisement -

ಉಪ್ಪಿನಂಗಡಿ: ತೋಡಿಗೆ ಬಿದ್ದು 10ನೇ ತರಗತಿ ಬಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಹಲೇಜಿ ಎಂಬಲ್ಲಿ ನಡೆದಿದೆ.

ತುರ್ಕಳಿಕೆ ಕರೆಂಕಿತೋಡಿ ನಿವಾಸಿ ಮುಹಮ್ಮದ್ ಮುಸ್ತಾಫ ಎಂಬವರ ಪುತ್ರ ಮಹಮ್ಮದ್ ತಂಝೀರ್ (16) ಮೃತ ಬಾಲಕ.

ತಂಝೀರ್ ಪುತ್ತಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿ. ತನ್ನ ಶಾಲಾ ಶಿಕ್ಷಕರೋರ್ವರ ತಾಯಿಯ ಪುಣ್ಯ ತಿಥಿಯಲ್ಲಿ ಭಾಗವಹಿಸಲೆಂದು ಕರಾಯ ಗ್ರಾಮದ ಹಲೇಜಿಗೆ ಹೋಗಿದ್ದು, ಮಧ್ಯಾಹ್ನ ಊಟ ಮಾಡಿ ಹಿಂದಿರುಗುವ ವೇಳೆ, ಸನಿಹದಲ್ಲೇ ಹರಿಯುವ ತೋಡಿನ ನೀರಿಗೆ ಬಿದ್ದು ನಾಪತ್ತೆಯಾಗಿದ್ದ.

ಜೊತೆಗಿದ್ದ ಸಹಪಾಠಿಗಳು ಹುಡುಕಾಟ ನಡೆಸಿ ವಿಫಲರಾದಾಗ, ಶಿಕ್ಷಕರ ಮನೆಗೆ ಮಾಹಿತಿ ನೀಡಿದ್ದು, ಶಿಕ್ಷಕರು ಮತ್ತವರ ಸಂಬಂಧಿಕರು ಬಾಲಕ ನೀರಿನಲ್ಲಿ ಮುಳುಗಿದ ಸ್ಥಳಕ್ಕೆ ಧುಮುಕಿ ನೀರಿನಾಳದಿಂದ ಆತನನ್ನು ಹೊರ ತೆಗೆದರಾದರೂ, ಆ ವೇಳೆ ಆತ ಮೃತಪಟ್ಟಿದ್ದ ಎನ್ನಲಾಗಿದೆ.

ಕಳೆದ ಒಂದು ತಿಂಗಳ ಅಂತರದಲ್ಲಿ ಮಹಮ್ಮದ್ ಮುಸ್ತಾಫರ ತಾಯಿ, ಮೃತಪಟ್ಟಿದ್ದು, ಇದೀಗ ಅವರ ಪುತ್ರನೂ ಸಾವನ್ನಪ್ಪಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ಸಂಬಂಧಿಸಿ ಮೃತ ಬಾಲಕನ ತಂದೆ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!