- Advertisement -
- Advertisement -
ಬೆಂಗಳೂರು : 18 ವರ್ಷಗಳ ಬಳಿಕ ಆರ್ಸಿಬಿ ಕಪ್ ಗೆದ್ದ ಖುಷಿ ಕೆಲವೇ ಗಂಟೆಗಳಲ್ಲಿ ಮಾಯವಾಗಿದೆ. ಇಂದು ಆರ್ ಸಿಬಿ ಆಟಗಾರರಿಗೆ ವಿಧಾನಸೌಧದ ಬಳಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆ ಬಳಿಕ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ರೋಡ್ ಶೋ ವ್ಯವಸ್ಥೆ ಮಾಡಲಾಗಿತ್ತು..
ಆದ್ರೆ ಈ ವೇಳೆ ಆಟಗಾರರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು ಕಾಲ್ತುಳಿತ ಉಂಟಾಗಿ ಇದುವರೆಗೂ 11 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 27 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ 19 ಮಂದಿ ದಾಖಲಾಗಿ 7 ಜನ ಸಾವನ್ನಪ್ಪಿದ್ರೆ, 8 ಮಂದಿ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಯಲ್ಲಿ ದಾಖಲಾದವರ ಈ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗೋ ಸಾಧ್ಯತೆಯಿದೆ.
- Advertisement -