- Advertisement -
- Advertisement -
ಬೆಂಗಳೂರು: ಕೋವಿಡ್ ನಿಯಂತ್ರಣದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆಸಿದೆ. ರಾಜ್ಯದ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಇಂದು ಆದೇಶ ನೀಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ರವಿ ಚೆನ್ನಣ್ಣನವರ್ ಸೇರಿದಂತೆ ಅನೇಕ ಜಿಲ್ಲಾ ಎಸ್ಪಿಗಳ ವರ್ಗಾವಣೆ ಮಾಡಿ ಆದೇಶ ನೀಡಿದೆ. ಇದೇ ವೇಳೆ ಮೈಸೂರು ಜಿಲ್ಲಾ ನೂತನ ಎಸ್ಪಿಯಾಗಿ ಆರ್ ಚೇತನ್ ಅವರನ್ನು ವರ್ಗಾಯಿಸಲಾಗಿದೆ.
ವರ್ಗಾವಣೆಗೊಂಡಿರುವ 12 ಅಧಿಕಾರಿಗಳ ವಿವರ ಇಲ್ಲಿದೆ…
- ಬೆಂಗಳೂರು ಗ್ರಾಮಾಂತರ ಎಸ್ಪಿಯಾಗಿದ್ದ ರವಿ ಡಿ ಚನ್ನಣ್ಣನವರ್ ಅವರನ್ನು ಸಿಐಡಿ ಎಸ್ಪಿ, ಬೆಂಗಳೂರಿಗೆ ವರ್ಗಾವಣೆ
- ಕರಾವಳಿ ಭದ್ರತಾ ಪಡೆ ಎಸ್ಪಿ ಆರ್ ಚೇತನ್ ಅವರನ್ನು ಮೈಸೂರು ಎಸ್ಪಿ ಆಗಿ ವರ್ಗಾವಣೆ
- ಕೋಲಾರ ಜಿಲ್ಲೆಯ ಎಸ್ಪಿ ಕಾರ್ತಿಕ್ ರೆಡ್ಡಿ ಅವರನ್ನು ಬೆಂಗಳೂರು ಎಸ್ಪಿಯಾಗಿ (ವೈರ್ಲೆಸ್) ವರ್ಗಾವಣೆ.
- ಬೆಂಗಳೂರಿನ ಅಪರಾಧ ತನಿಖಾ ಇಲಾಖೆಯ ರಾಹುಲ್ ಕುಮಾರ್ ಶಹಾಪೂರ್ವದ್ ಅವರನ್ನು ತುಮಕೂರು ಎಸ್ಪಿಯಾಗಿ
- ದಾವಣಗೆರೆ ಜಿಲ್ಲೆಯ ಎಸ್ಪಿ ಹನುಮಂತರಾಯ ಅವರನ್ನು ಹಾವೇರಿ ಜಿಲ್ಲೆಗೆ ವರ್ಗಾವಣೆ.
- ಮೈಸೂರಿನ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಡಾ. ಎ.ಎನ್. ಪ್ರಕಾಶ್ ಗೌಡ ಅವರನ್ನು ಬೆಂಗಳೂರು ಆಂತರಿಕ ಭದ್ರತಾ ವಿಭಾಗಕ್ಕೆ.
- ಹಾವೇರಿ ಜಿಲ್ಲೆಯ ಎಸ್ಪಿ ಕೆ.ಜಿ. ದೇವರಾಜು ಅವರನ್ನು ಬೆಂಗಳೂರಿನ ಸಿಐಡಿ ಎಸ್ಪಿಯಾಗಿ.
- ಮೈಸೂರಿನ ಎಸ್ಪಿ ಸಿ.ಬಿ. ರಿಷ್ಯಂತ್ ಅವರನ್ನು ದಾವಣಗೆರೆ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.
- ಕಲಬುರಗಿ ಜಿಲ್ಲೆಯ ಡಿಸಿಪಿ ಡೆಕ್ಕ ಕಿಶೋರ್ ಬಾಬು ಅವರನ್ನು ಕೋಲಾರ ಜಿಲ್ಲೆಯ ಎಸ್ಪಿಯಾಗಿ ವರ್ಗಾವಣೆ.
- ತುಮಕೂರಿನ ಎಸ್ಪಿ ಡಾ. ಕೋನಾ ವಂಶಿ ಕೃಷ್ಣ ಅವರನ್ನು ಬೆಂಗಳೂರು ಗ್ರಾಮಾಂತರ ಎಸ್ಪಿಯಾಗಿ ವರ್ಗಾವಣೆ
- ಬೆಂಗಳೂರಿನ ಆಂತರಿಕ ಭದ್ರತಾ ಇಲಾಖೆಯ ಎಸ್ಪಿ ಪ್ರದೀಪ್ ಗುಂಟಿ ಅವರನ್ನು ಮೈಸೂರು ನಗರದ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ವರ್ಗಾವಣೆ.
- ಬೆಂಗಳೂರಿನ (ವೈರ್ಲೆಸ್) ಎಸ್ಪಿ ಅಡ್ಡೂರು ಶ್ರೀನಿವಾಸುಲು ಅವರನ್ನು ಕಲಬುರಗಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ವರ್ಗಾವಣೆ.
- Advertisement -