- Advertisement -
- Advertisement -
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಬೇಟೆಯಾಡಿದ್ದು 13 ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಮೆಂಧರ್-ಪೂಂಚ್ ಪ್ರದೇಶದ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಭಾರತೀಯ ಯೋಧರು 13 ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
ಮೇ 28ರಂದು ಉಗ್ರರು ನಿಯಂತ್ರಣ ರೇಖೆ ನುಸುಳುವ ಮಾಹಿತಿ ಲಭ್ಯವಾಗಿತ್ತು. ಕೂಡಲೇ ಆಯಕಟ್ಟಿನ ಸ್ಥಳಗಳಲ್ಲಿ ಯೋಧರನ್ನು ನಿಯೋಜಿಸಲಾಗಿತ್ತು. ಇಂದು ಬೆಳಗ್ಗೆ ಉಗ್ರರು ನೌಶೇರಾ ಸೆಕ್ಟರ್ ಹಾಗೂ ಜಮ್ಮು ವಿಭಾಗದ ಗಡಿ ನಿಯಂತ್ರಣ ರೇಖೆ ನುಸುಳಲು ಯತ್ನಿಸಿದಾಗ ಯೋಧರು ದಾಳಿ ನಡೆಸಿದರು. ಪೂಂಚ್ ಜಿಲ್ಲೆಯ ಹಳ್ಳಿಗಳಲ್ಲಿ ಉಗ್ರರು ಅಡಗಿರುವ ಮಾಹಿತಿ ಇದ್ದು ಶೋಧ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
- Advertisement -