- Advertisement -
- Advertisement -
ಬೆಂಗಳೂರು: ರಾಜ್ಯಾದ್ಯಂತ ಇಂದು ಕೊರೊನಾ ವೈರಸ್ ಭೀತಿಯ ನಡುವೆಯೂ ಎಸ್ಎಸ್ಎಲ್ ಸಿ ಪರೀಕ್ಷೆ ನಡೆದಿದ್ದು, ಇಂದು ನಡೆದ ಮೊದಲ ಪರೀಕ್ಷೆ ದ್ವಿತೀಯ ಭಾಷೆ ಇಂಗ್ಲಿಷ್/ಕನ್ನಡ ಪತ್ರಿಕೆಗೆ ಒಟ್ಟು 13,212 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪ್ರಾಥಮಿಕ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತಂತೆ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್, ಮೊದಲ ದಿನವಾದ ಇಂದು ಎಸ್ಎಸ್ ಎಲ್ ಸಿ ಪರೀಕ್ಷೆಗೆ 13,212 ಮಂದಿ ಗೈರು ಹಾಜರಾಗಿದ್ದರು. ಶೇ. 98.3 ರಷ್ಟು ವಿದ್ಯಾರ್ಥಿಗಳು ಯಶಸ್ವಿಯಾಗಿ ಪರೀಕ್ಷೆ ಬರೆದಿದ್ದಾರೆ ಎಂದು ಹೇಳಿದರು.
- Advertisement -