Friday, May 17, 2024
Homeತಾಜಾ ಸುದ್ದಿಮುರುಘಾ ಶ್ರೀಗಳಿಗೆ 14 ದಿನಗಳ‌ ಕಾಲ‌ ನ್ಯಾಯಾಂಗ ಬಂಧನ

ಮುರುಘಾ ಶ್ರೀಗಳಿಗೆ 14 ದಿನಗಳ‌ ಕಾಲ‌ ನ್ಯಾಯಾಂಗ ಬಂಧನ

spot_img
- Advertisement -
- Advertisement -

ಚಿತ್ರದುರ್ಗ; ನಿನ್ನೆ ರಾತ್ರಿ ಬಂಧನಕ್ಕೆ ಒಳಗಾದ ಚಿತ್ರದುರ್ಗದ ಮುರುಘಾಮಠದ ಶ್ರೀಗಳನ್ನು  ನಿನ್ನೆ ರಾತ್ರಿ  ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುಉವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ಈ ವೇಳೆ‌ ವಿಚಾರಣೆ ನಡೆಸಿದ ನ್ಯಾ. ಕೋಮಲ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.

ಈ ನಡುವೆ ಮುರುಘಾ ಶರಣರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಚಿತ್ರದುರ್ಗದ ಒಂದನೆ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ವಾದಿ-ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಸದ್ಯ ಅವರನ್ನು ನ್ಯಾಯಾಧೀಶರ ಮುಂದೆ ಕೂಡ ಹಾಜರು ಪಡಿಸಿ, ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿದ್ದು, ಅಲ್ಲಿ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!