ಬೆಂಗಳೂರು : ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆ ಇಂದಿನಿಂದ 14 ದಿನಗಳ ಕಾಲ ರಾಜ್ಯ ಲಾಕ್ ಡೌನ್ ಆಗಲಿದೆ. ಅಗತ್ಯ ವಸ್ತುಗಳ ಖರೀದಿಗೂ ಸಮಯ ನಿಗದಿಯಾಗಿದ್ದು, ಜನರು ಅನಗತ್ಯವಾಗಿ ರಸ್ತೆಗಳಿಯುವಂತಿಲ್ಲ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕ್ಲೋಸ್ಡೌನ್ ಜಾರಿ ಮಾಡಿದೆ.
ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ:
* ನಾಳೆಯಿಂದ 14 ದಿನಗಳ ಕಾಲ ಬೆಳಿಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸುಗಳ ಖರೀದಿಗೆ ಮಾತ್ರ ಅವಕಾಶ
* ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ , ಮೆಟ್ರೋ, ಸೇರಿದಂತೆ ಸಾರಿಗೆ ಸಂಚಾರ ಸಂಪೂರ್ಣ ಬಂದ್
* ಖಾಸಗಿ ವಾಹನ ಸಂಚಾರಕ್ಕೆ ನಿಷೇಧ
* ಗೂಡ್ಸ್ ಸರಕು ಸಾಗಾಟಕ್ಕೆ ಮಾತ್ರ ಅವಕಾಶ
* ಹೋಟೆಲ್ ನಲ್ಲಿ ಪಾರ್ಸೆಲ್ ಗೆ ಅವಕಾಶ
* ಮದ್ಯಗಂಡಿಗಳು ಓಪನ್, ಆದರೆ ಪಾರ್ಸೆಲ್ ಗೆ ಅವಕಾಶ
* ಮೆಟ್ರೋ ಸೇವೆ ಸ್ಥಗಿತ
* ಬ್ಯಾಂಕಿಂಗ್ ಕ್ಷೇತ್ರಕ್ಕೆ ಅವಕಾಶ
* ಕೃಷಿ ಚಟುವಟಿಕೆ, ಕಟ್ಟಡ ನಿರ್ಮಾಣಕ್ಕೆ ಅವಕಾಶ
* 18-45 ವರ್ಷಗಳವರೆಗಿನವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ
* ಚುನಾವಣೆಗಳನ್ನು ಮುಂದೂಡಲು ಶಿಫಾರಸು ಕರ್ನಾಟಕ ಸರ್ಕಾರ ಸಚಿವ ಸಂಪುಟದ ನಿರ್ಧಾರ ಬಿ ಎಸ್ ಯಡಿಯೂರಪ್ಪ ಅಧಿಕೃತ ಆದೇಶ