- Advertisement -
- Advertisement -
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿ 14 ಆನೆಗಳು ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ. ಅಭಿಮನ್ಯು, ವಿಜಯ, ವರಲಕ್ಷ್ಮೀ, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಗೋಪಿ, ಪ್ರಶಾಂತ್, ಸುಗ್ರೀವ, ಕಂಜನ್, ರೋಹಿತ್, ಲಕ್ಷ್ಮೀ, ಹಿರಣ್ಯ ಆನೆಗಳು ದಸರಾ ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ.
ಈ ಬಾರಿ ಸ್ಥಬ್ದ ಚಿತ್ರಗಳಾಗಿ ಗ್ಯಾರಂಟಿ ಯೋಜನೆಗಳು ಕಾಣಿಸಿಕೊಳ್ಳಲಿವೆ.ಶಕ್ತಿ ಯೋಜನೆ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ, ಯುವನಿಧಿ ಯೋಜನೆಯ ಸ್ಥಬ್ಧ ಚಿತ್ರಗಳನ್ನು ನಿರ್ಮಾಣ ಮಾಡಲಾಗಿದ್ದು ಈ ಬಾರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಆಕರ್ಷಕವಾಗಿವೆ.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಂದೇಶ ಸಾರುವ ಸ್ತಬ್ಧ ಚಿತ್ರಗಳು ಈ ಬಾರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗಲಿವೆ. ರಾಜ್ಯದ ವಿವಿಧ ಭಾಗಗಳಿಂದ ಸ್ತಬ್ಧ ಚಿತ್ರಗಳು ಆಗಮಿಸಿದ್ದು ಅರಮನೆಯಿಂದ ಬನ್ನಿ ಮಂಟಪದವರೆಗೂ ಸ್ಥಬ್ಧ ಚಿತ್ರಗಳು ಸಾಗಲಿವೆ.
- Advertisement -