Friday, June 27, 2025
Homeತಾಜಾ ಸುದ್ದಿಭೀಕರ ರಸ್ತೆ ಅಪಘಾತ: ಮದುವೆಗೆ ಹೋಗಿ ಬರುತ್ತಿದ್ದ 14 ಮಂದಿ ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತ: ಮದುವೆಗೆ ಹೋಗಿ ಬರುತ್ತಿದ್ದ 14 ಮಂದಿ ಸ್ಥಳದಲ್ಲೇ ಸಾವು

spot_img
- Advertisement -
- Advertisement -

ಲಕ್ನೋ: ಮದುವೆ ಸಮಾರಂಭ ಮುಗಿಸಿ ಬರುತ್ತಿದ್ದ 14 ಮಂದಿ ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಉತ್ತರಪ್ರದೇಶದ ಪ್ರತಾಪ್ ಗರ್ ನಲ್ಲಿ ನಡೆದಿದೆ.

ಬೊಲೆರೋ ಹಾಗೂ ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ಮಕ್ಕಳು ಸೇರಿ ಒಟ್ಟು 14 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.  ಮಣಿಕಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಪ್ರಯಾಗರಾಜ್- ಲಕ್ನೋ ಹೆದ್ದಾರಿಯಲ್ಲಿ ನಿನ್ನೆ ಮಧ್ಯರಾತ್ರಿ ಈ ಭೀಕರ ಅಪಘಾತ ನಡೆದಿದೆ. ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ, ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ಬೊಲೆರೋದಲ್ಲಿದ್ದವರು ನಬಬ್ ಗಂಜ್ ಪ್ರದೇಶದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಘಟನೆ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ.

- Advertisement -
spot_img

Latest News

error: Content is protected !!