- Advertisement -
- Advertisement -
ಕುಂದಾಪುರ: ಇಲ್ಲಿಗೆ ಸಮೀಪದ ಉಪ್ಪಿನಕುದ್ರು ಶ್ರೀಲಲಿತಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆಂದು ಕಂಪೌಂಡ್ ಗೋಡೆಗೆ ಅಳವಡಿಸಿದ್ದ ವಿದ್ಯುದ್ದೀಪದ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಉಪ್ಪಿನಕುದ್ರುವಿನ ಗಂಗಾಧರ ಆಚಾರ್ ಎಂಬವರ ಪುತ್ರ ಧನುಷ (16) ಎಂದು ಗುರುತಿಸಲಾಗಿದೆ. ಮೃತ ಧನುಷ್ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಧನುಷ್ ನ ಮನೆಯ ಪಕ್ಕವೇ ಈ ದೇವಸ್ಥಾನವಿದ್ದು, ನವರಾತ್ರಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೇವಸ್ಥಾನದ ಕಂಪೌಂಡ್ ಗೋಡೆಗೆ ಅಳವಡಿಸಿದ ವಿದ್ಯುದ್ದೀಪದ ಕೇಬಲ್ ಆಕಸ್ಮಿಕವಾಗಿ ತಾಗಿ ಧನುಷ್ ತೀವ್ರ ಅಸ್ವಸ್ಥಗೊಂಡರೆನ್ನಲಾಗಿದೆ.
ಕೂಡಲೇ ಇವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಧನುಷ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -