- Advertisement -
- Advertisement -
ಕಡಬ ಇಲಿ ಜ್ವರಕ್ಕೆ 19 ವರ್ಷದ ಯುವಕನೊಬ್ಬ ಬಲಿಯಾಗಿರುವ ಘಟನೆ ಕಡಬದಲ್ಲಿ ನಡೆದಿದೆ. ಇಲಿ ಜ್ವರದಿಂದ ಬಳಲುತ್ತಿದ್ದ ಮೋಹಿತ್ (19) ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ಮೃತಪಟ್ಟಿದ್ದಾನೆ.
ಕಡಬ ತಾಲೂಕು ಐತ್ತೂರು ಗ್ರಾಮದ ಪಂಜೋಡಿ ನಿವಾಸಿ ಶಿವಪ್ಪ ಗೌಡ ಎಂಬವರ ಪುತ್ರ ಮೋಹಿತ್ (19) ಕಳೆದ ಕೆಲವು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ. ಆತನನ್ನು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಚಿಕಿತ್ಸೆ ಫಲಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ. ಮೃತ ಯುವಕ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
- Advertisement -