ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಎರಡು ಅಪರಿಚಿತ ಪುರುಷರ ಅನಾಥ ಶವಗಳು ಪತ್ತೆಯಾಗಿದೆ. ಎರಡು ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಪವನ್ ನಾಯಕ್, ಪ್ರಕರಣದ ತನಿಖಾಧಿಕಾರಿಯಾಗಿ ಎಎಸ್ಐ ಬಾಲಕೃಷ್ಣ ಹಾಗೂ ಠಾಣಾ ಸಿಬ್ಬಂದಿಗಳು ಭೇಟಿ ನೀಡಿ ಸ್ಥಳ ಪರಿಶೀಲಿಸಿ, ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೊದಲ ಪ್ರಕರಣ:
ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಂಗಾ ಬಿಲ್ಡಿಂಗ್ ಎದುರುಗಡೆ ಗ್ಯಾಲರಿಯಲ್ಲಿ ಸುಮಾರು 65-70 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಸುಮಾರು ಸಮಯಗಳಿಂದ ಶ್ರೀಕ್ಷೇತ್ರ ವಠಾರದಲ್ಲಿ ಸನ್ಯಾಸಿಯಂತೆ ಸಂಚರಿಸುತ್ತಿದ್ದು ಯಾವುದೇ ಅಸೌಖ್ಯದಿಂದ ಮೃತ ಪಟ್ಟಿರಬಹುದು. ಅಲ್ಲದೇ ಮೃತರ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲ ಎಂದು ಪೋಲೀಸರ ವರದಿಯಲ್ಲಿ ಉಲ್ಲೇಖವಾಗಿದೆ .
ಎರಡನೇ ಪ್ರಕರಣ:
ಧರ್ಮಸ್ಥಳ ಗ್ರಾಮದ ಮಣ್ಣಸಂಕ ಬಳಿ ಅರಣ್ಯ ಪ್ರದೇಶದಲ್ಲಿ ಚಾಕೋಟೆ ಮರದ ಗೆಲ್ಲಿಗೆ ಹಗ್ಗವನ್ನು ಕಟ್ಟಿ ನೇಣುಬಿಗಿದ ಸ್ಥಿತಿಯಲ್ಲಿ ಸುಮಾರು 60-65 ವರ್ಷ ಪ್ರಾಯದ ಗಂಡಸು ವ್ಯಕ್ತಿಯ ಮೃತದೇಹವು ಪತ್ತೆಯಾಗಿದೆ. ಅಲ್ಲದೇ ಮೃತರ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲ ಎಂದು ಪೋಲೀಸರ ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ.