ಮುಂಬೈ : ಐಪಿಎಲ್ 2022ರ ಟೂರ್ನಿಯಲ್ಲಿ ಮುಂಬೈ ತಂಡದ ಪರ ಲೀಗ್ ಪಂದ್ಯಗಳಲ್ಲಿ ಆಡಲು ಅರ್ಜುನ್ಗೆ ಅವಕಾಶ ಸಿಗದ ಕಾರಣ ಸಚಿನ್ ತೆಂಡೂಲ್ಕರ್ ಮೌನ ಮುರಿದಿದ್ದಾರೆ.
ಈ ಕುರಿತು ಸಚಿನ್ ತೆಂಡೂಲ್ಕರ್ ಮಂಗಳವಾರದಂದು ಯೂಟ್ಯೂಬ್ ಚಾನೆಲ್ವೊಂದರ ಸಂದರ್ಶನದಲ್ಲಿ ಮಾತನಾಡಿ, ಅರ್ಜುನ್ಗೆ ಕೇವಲ ತನ್ನ ಆಟದ ಮೇಲೆ ಗಮನಹರಿಸೆಂದು ಹೇಳಿದ್ದೆ. ತಂಡದ ಆಯ್ಕೆಯ ಭಾಗದ ಬಗ್ಗೆ ನಾನು ಯೋಚಿಸುವುದಿಲ್ಲ. ಆಯ್ಕೆ ಪ್ರಕ್ರಿಯೆಯಲ್ಲಿಯೂ ತೊಡಗುವುದಿಲ್ಲ. ನಾನು ಆ ಭಾಗವನ್ನು ನಿರ್ವಹಣೆಗೆ ಮಾತ್ರ ಬಿಡುತ್ತೇನೆ ಎಂದು ವಿವರಿಸಿದ್ದಾರೆ.
ಎಡಗೈ ಮಧ್ಯಮ ವೇಗಿ ಅರ್ಜುರನ್ನು ಈ ವರ್ಷದ ಐಪಿಎಲ್ 2022ರ ಮೆಗಾ ಹರಾಜಿನಲ್ಲಿ 30 ಲಕ್ಷ ನೀಡಿ ಖರೀದಿಸಲಾಗಿತ್ತು. ಆದರೆ ಲೀಗ್ ಹಂತದ ಒಂದೇ ಒಂದು ಪದ್ಯಂದಲ್ಲಿಯೂ ಅವರಿಗೆ ಆಡಲೂ ಅವಕಾಶ ಸಿಕ್ಕಿರಲಿಲ್ಲ.
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಆಡಿರುವ 14 ಪಂದ್ಯಗಳಲ್ಲಿ 4ರಲ್ಲಿ ಗೆಲುವನ್ನು ಸಾಧಿಸಿದ್ದು, 10 ಪಂದ್ಯಗಳಲ್ಲಿ ಸೋಲನ್ನು ಕಂಡಿದೆ. ಪಾಯಿಂಟ್ಸ್ ಪಟ್ಟಿಯಲ್ಲಿಯೂ ಕೊನೆ ಸ್ಥಾನದಲ್ಲಿದ್ದು, ಟೂರ್ನಿಯ ಆರಂಭದಿಂದಲೂ ಸ್ಥಿರ ಪ್ರದರ್ಶನ ನೀಡಲು ಎಡವಿದ್ದ ಮುಂಬೈ ಪ್ಲೇ ಆಫ್ ಹಂತಕ್ಕೇರಲು ವಿಫಲವಾಗಿದೆ