- Advertisement -
- Advertisement -
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸದ್ಯಕ್ಕಂತೂ ಕೊರೊನಾ ಆರ್ಭಟ ನಿಲ್ಲುವ ಯಾಲವ ಲಕ್ಷಣಗಳು ಕೂಡ ಕಾಣಿಸುತ್ತಿಲ್ಲ. ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇನ್ನು ಇವತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ 237 ಹೊಸ ಕೇಸುಗಳು ಪತ್ತೆಯಾಗಿವೆ. ನಿನ್ನೆ ಬರೋಬ್ಬರಿ 311 ಕೇಸುಗಳು ವರದಿಯಾಗಿ ಆತಂಕಕ್ಕೆ ಕಾರಣವಾಗಿದ್ದವು. ಇವತ್ತು 237 ಕೇಸುಗಳು ಹೊಸದಾಗಿ ವರದಿಯಾಗಿವೆ.
ಹಾಗೆಯೆ ಕೊರೋನಾದಿಂದಾಗಿ ಜಿಲ್ಲೆಯಲ್ಲಿ ಇಂದು ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಇನ್ನು ಅತ್ತ ಉಡುಪಿಯಲ್ಲಿ ಇಂದು ಒಂದೇ ದಿನದಲ್ಲಿ 109 ಮಂದಿಗೆ ಕೊರೊನಾ ದೃಢಪಟ್ಟಿದೆ. ಸದ್ಯ ವರದಿಯಾಗುತ್ತಿರುವ ಕೇಸುಗಳ ಸಂಖ್ಯೆ ನೋಡಿದ್ರೆ ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹಾಗೇ ಕೋವಿಡ್ ಸಮುದಾಯಕ್ಕೆ ಹರಡಿರೋದು ಸ್ಪಷ್ಟವಾಗುತ್ತಿದೆ.
- Advertisement -