Friday, May 3, 2024
Homeಕರಾವಳಿಸುಳ್ಯ; ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಶರಣಾಗುವಂತೆ ಮತ್ತೊಮ್ಮೆ ಎಚ್ಚರಿಕೆ ಸಂದೇಶ ರವಾನಿಸಿದ ಎನ್‌ಐಎ

ಸುಳ್ಯ; ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಶರಣಾಗುವಂತೆ ಮತ್ತೊಮ್ಮೆ ಎಚ್ಚರಿಕೆ ಸಂದೇಶ ರವಾನಿಸಿದ ಎನ್‌ಐಎ

spot_img
- Advertisement -
- Advertisement -

ಸುಳ್ಯ; ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಶರಣಾಗುವಂತೆ ಎನ್‌ಐಎ ಮತ್ತೊಮ್ಮೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಸುಳ್ಯ‌ ನಗರ ಹಾಗೂ ಬೆಳ್ಳಾರೆಯಲ್ಲಿ ಈ ಕುರಿತಂತೆ ಮೈಕ್ ಮೂಲಕ ಅನೌನ್ಸ್ ಮೆಂಟ್ ಮಾಡಿದ ಎನ್ಐಎ ಅಧಿಕಾರಿಗಳು,
ಈ ಎಚ್ಚರಿಕೆಗೂ ಬಗ್ಗದಿದ್ದರೆ ಮೂರನೇಯ ಎಚ್ಚರಿಕೆಯ ಸಂದೇಶವನ್ನು ಹೊರಡಿಸಲಾಗುತ್ತದೆ. ಆ ಎಚ್ಚರಿಕೆಯ ಸಂದೇಶದಲ್ಲೂ ಶರಣಾಗದೆ ಹೋದರೆ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಪಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳಲಿದೆ ಎಂದಿದ್ದಾರೆ.

ಆರೋಪಿಗಳು ಆಗಸ್ಟ್ 18ರೊಳಗೆ ಶರಣಾಗಲೇಬೇಕು ಎಂದು ಸೂಚಿಸಿದೆ. ಈ ಹಿಂದೆ ಜೂ.30ರೊಳಗೆ ಶರಣಾಗಬೇಕು ಎಂದು ಹೇಳಿದ್ದು, ಇಲ್ಲದೇ ಹೋದಲ್ಲಿ ಅವರ ಮನೆಯನ್ನು ಜಪ್ತಿ ಮಾಡುವುದಾಗಿ ಎನ್ಎಐಎ ಅಧಿಕಾರಿಗಳು ಧ್ವನಿ ವರ್ಧಕದ ಮೂಲಕ ತಿಳಿಸಿದ್ದರು. ಆದರೆ ಇದುವರೆಗೆ ಪ್ರವೀಣ್ ನೆಟ್ಟಾರು ಹಂತಕರು ಶರಣಾಗಿರಲಿಲ್ಲ.

ಇದಕ್ಕೆ ಸಂಬಂಧಿಸಿದಂತೆ ಎರಡು ವಾರಗಳ ಹಿಂದೆ ಎನ್‌ಐಎ ಅಧಿಕಾರಿಗಳು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿವರ್ಧಕದ ಮೂಲಕ ಅನೌನ್ಸ್ ಮಾಡುತ್ತಿದ್ದು, ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!