- Advertisement -
- Advertisement -
ಮಣಿಪಾಲ: ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕಲಾವಿದರು ಮಾಡಿದ ಪ್ರಯತ್ನ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. 3-ಡಿ ಸೊಳ್ಳೆ ಕಲಾಕೃತಿ ರಚಿಸಿದ ಕಲಾವಿದರು ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಮಣಿಪಾಲ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಕಲಾವಿದರಾದ ಶ್ರೀನಾಥ್ ಮಣಿಪಾಲ ಮತ್ತು ರವಿ ಹಿರೆಬೆಟ್ಟು ಇವರು ಮಾಹೆಯ ಇಂಟರಾಕ್ಟ್ ಆವರಣದಲ್ಲಿ ಡೆಂಗಿ, ಮಲೇರಿಯಾ ಇನ್ನಿತರ ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೃಹತ್ ಗಾತ್ರದ ಸೊಳ್ಳೆಯ ಕಲಾಕೃತಿಯನ್ನು ರಚಿಸಿದ್ದಾರೆ. ಈ ಆಕರ್ಷಕ 3- ಡಿ ಕಲಾಕೃತಿಯು ಇದೀಗ ಜನರ ಗಮನ ಸೆಳೆಯಿತು
- Advertisement -