ಮಗಳೂರು: ಕಿಲ್ಲರ್ ಕೊರೊನಾ ವೈರಸ್ ದಾಳಿಯಿಂದ ತತ್ತರಿಸುತ್ತಿರುವ ಕರಾವಳಿಯಲ್ಲಿ ಇಂದು 3 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರಿಗೆ ಮತ್ತು ಉಡುಪಿ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ. ಆದರೆ ದುರದೃಷ್ಟವೆಂಬಂತೆ ಉಡುಪಿ ಜಿಲ್ಲೆಯ ಕುಂದಾಪುರದ ಸೋಂಕು ಪೀಡಿತ ವ್ಯಕ್ತಿ (54 ವರ್ಷ) ನಿನ್ನೆ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ 31 ವರ್ಷದ ಪುರುಷ ಮತ್ತು 35 ವರ್ಷದ ಮಹಿಳೆಗೆ ಸೋಂಕು ತಗುಲಿದೆ. ಜಿಲ್ಲೆಯ ಯುವಕನಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದ್ದು, ಈತನ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಮತ್ತೋರ್ವ ಸೋಂಕಿತೆ 35 ವರ್ಷದ ಮಹಿಳೆಯಾಗಿದ್ದು, ಈಕೆ ಮಹಾರಾಷ್ಟ್ರದಿಂದ ಬಂದಿದ್ದರು ಎನ್ನಲಾಗಿದೆ. ಇಬ್ಬರಿಗೂ ಮಂಗಳೂರಿನ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ರಾಜ್ಯದಲ್ಲಿ 54 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ1146ಕ್ಕೆ ಏರಿಕೆಯಾಗಿದೆ.
ಮಂಡ್ಯ 22
ಕಲಬುರ್ಗಿ 10
ಹಾಸನ 06
ದಾರವಾಡ 04
ಕೋಲಾರ 03
ಯಾದಗಿರಿ 03
ದಕ್ಷಿಣಕನ್ನಡ 02
ಶಿವಮೊಗ್ಗ 02
ಉಡುಪಿ 01
ವಿಜಯಪುರ 01