ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಯಾಗುತ್ತಲೇ ಇದೆ. ಈಗಾಗಲೇ 14 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ನಿನ್ನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 96 ಪ್ರಕರಣಗಳು ಪತ್ತೆಯಾಗಿತ್ತು. ಇವತ್ತು 32 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.
ಇನ್ನು ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಇದುವರೆಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ 13,440 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ಇನ್ನು ಇವತ್ತು ಲಭ್ಯವಾದ ಗಂಟಲು ದ್ರವ ಮಾದರಿಯ 458 ವರದಿಗಳಲ್ಲಿ 32 ವರದಿಗಳು ಪಾಸಿಟಿವ್ ಬಂದಿದೆ. ಜಿಲ್ಲೆಯಲ್ಲಿ ಒಟ್ಟು ಇದುವರೆಗೂ ಒಟ್ಟು 705 ಕೇಸುಗಳು ವರದಿಯಾಗಿದ್ದು ಅದರಲ್ಲಿ 426 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಗಂಟಲು ದ್ರವದ ಪರೀಕ್ಷೆ ನಡೆಸಿದ 13,440 ರಲ್ಲಿ 13, 292 ಮಂದಿಯ ಸ್ಯಾಂಪಲ್ ದೊರಕಿದ್ದು, ಉಳಿದವರು ವರದಿಗಾಗಿ ಕಾಯುತ್ತಿದ್ದಾರೆ. ಇನ್ನು ಹಲವು ಮಂದಿಯಲ್ಲಿ ರೋಗಲಕ್ಷಣಗಳಿದ್ದು ಅವರೆಲ್ಲರ ಗಂಟಲು ದ್ರವದ ಪರೀಕ್ಷೆ ನಡೆಸಿದ ಬಳಿಕ ಇನ್ನಷ್ಟು ಹೊಸ ಕೇಗಳು ಪತ್ತೆಯಾಗುವ ಸಾಧ್ಯತೆ ಇದೆ.