ಮಂಗಳೂರು: ರಾಜ್ಯದಾದ್ಯಂತ ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ಬಿಗಿ ಭದ್ರತೆ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಕೇರಳ ರಾಜ್ಯದ ಜೊತೆ ಸಾಕಷ್ಟು ರೀತಿಯಲ್ಲಿ ಸಂಪರ್ಕ ಹೊಂದಿದೆ. ಮುಖ್ಯ ರಸ್ತೆ ಹೊರತು ಪಡಿಸಿ ಕಾಲುದಾರಿ ಮೂಲಕ ಕೇರಳ ಜೊತೆ ಸಂಪರ್ಕವಿದೆ. ಜಿಲ್ಲೆಯನ್ನ ಸಂಪರ್ಕಿಸುವ 7 ರಸ್ತೆಗಳು ಕಮೀಷನರೇಟ್ ವ್ಯಾಪ್ತಿಯಲ್ಲಿವೆ. ಅತೀ ಮುಖ್ಯವಾದ ತಲಪಾಡಿ ಚೆಕ್ ಪೋಸ್ಟ್ನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇನ್ನು ನೈಟ್ ಕರ್ಫ್ಯೂ ವೇಳೆಯಲ್ಲಿ ಅನಾವಶ್ಯಕವಾಗಿ ಯಾರು ಸಂಚಾರ ಮಾಡುವಂತಿಲ್ಲ. ತುರ್ತು ಪರಿಸ್ಥಿತಿಯಲ್ಲಿ ಓಡಾಟ ಮಾಡುವವರಿಗೆ ಗುರುತಿನ ಚೀಟಿ ಕಡ್ಡಾಯ. ರೈಲ್ವೆ, ಏರ್ಪೋರ್ಟ್ಗೆ ಹೋಗುವವರು ಟಿಕೆಟ್ ತೋರಿಸಿ ಸಂಚರಿಸಿ. ನಗರದಲ್ಲಿ ಒಟ್ಟು 36 ಚೆಕ್ ಪೊಸ್ಟ್ ಹಾಕಲು ಸೂಚನೆ ನೀಡಲಾಗಿದೆ. ಅಧಿಕಾರಿಗಳಿಗೆ ತುಂಬಾ ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ. ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಸಂಚಾರಕ್ಕೆ ನಿರ್ಬಂಧ ಹೇರಲಾಗುವುದು ಎಂದಿದ್ದಾರೆ.