- Advertisement -
- Advertisement -
ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ಪುನರ್ ರಚನೆ ಇಂದು ಆಗಲಿದೆ. 43 ಹೊಸ ಹಾಗೂ ಹಳೆಯ ಸಚಿವರು ಇಂದು ಸಂಜೆ ಆರು ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕರ್ನಾಟಕದ ನಾಲ್ಕು ನಾಯಕರಿಗೆ ಹೊಸದಾಗಿ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ. ಉಡುಪಿ-ಚಿಕ್ಕಮಗಳೂರಿನ ಸಂಸದೆ ಶೋಭಾ ಕರಂದ್ಲಾಜೆ, ಬೀದರ್ ಬಿಜೆಪಿ ಸಂಸದ ಭಗವಂತ್ ಖೂಬಾ, ಚಿತ್ರದುರ್ಗದ ಸಂಸದ ಆನೇಕಲ್ ನಾರಾಯಣಸ್ವಾಮಿ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ರಾಜೀವ್ ಚಂದ್ರಶೇಖರ್ ಅವರಿಗೆ ಹೊಸದಾಗಿ ಸಚಿವ ಸ್ಥಾನ ನೀಡಲಾಗುತ್ತಿದೆ.
- Advertisement -