- Advertisement -
- Advertisement -
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ತನ್ನ ಸಾವಿನ ಸವಾರಿಯನ್ನು ಮುಂದುವರೆಸಿದೆ. ಇಂದು ಮಹಾಮಾರಿಗೆ ಜಿಲ್ಲೆಯಲ್ಲಿ ಐವರು ಬಲಿಯಾಗಿದ್ದಾರೆ.
ಬೆಳ್ತಂಗಡಿ ಯ ಪಿಲಿಚಾಮುಂಡಿಕಲ್ಲು ನಿವಾಸಿ 60 ವರ್ಷದ ವೃದ್ಧ, ಪುತ್ತೂರಿನ ಮೂಲಡ್ಕ ನಿವಾಸಿ 50 ವರ್ಷದ ವ್ಯಕ್ತಿ,ಮಂಗಳೂರಿನ ಉರ್ವಾಸ್ಟೋರ್ ನ 72 ವರ್ಷದ ವೃದ್ಧ, ಮಂಗಳೂರಿನ ಬಳ್ಳಾಲ್ ಭಾಗ್ ನಿವಾಸಿ 60 ವರ್ಷದ ವೃದ್ಧೆ, ಮಂಗಳೂರಿನ ಬಂದರು ನಿವಾಸಿ 68 ವರ್ಷದ ವೃದ್ಧೆ ಬಲಿಯಾಗಿದ್ದಾರೆ.
ಈ ಐದು ಮಂದಿಯಲ್ಲಿ ನಾಲ್ವರು ಮಂಗಳೂರು ಕೋವಿಡ್ ಆಸ್ಪತ್ರೆ ಯಲ್ಲಿ ಸಾವನ್ನಪ್ಪಿದ್ದಾರೆ. ಪುತ್ತೂರು ಮೂಲದ ಸೋಂಕಿತ ದೇರಳಕಟ್ಟೆ ಖಾಸಗಿ ಆಸ್ಪತ್ರೆ ಯಲ್ಲಿ ಸಾವಿಗೀಡಾಗಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ.
- Advertisement -