Friday, June 27, 2025
Homeಕರಾವಳಿಮಂಗಳೂರುಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಅಕ್ರಮ ಶಸ್ತ್ರಾಸ್ತ್ರ, ಮಾದಕ ವಸ್ತು ಗಾಂಜಾ, ಸಹಿತ ಕುಖ್ಯಾತ...

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಅಕ್ರಮ ಶಸ್ತ್ರಾಸ್ತ್ರ, ಮಾದಕ ವಸ್ತು ಗಾಂಜಾ, ಸಹಿತ ಕುಖ್ಯಾತ ಅಂತಾರಾಜ್ಯ ಕ್ರಿಮಿನಲ್ ಗಳ ಬಂಧನ

spot_img
- Advertisement -
- Advertisement -

ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ 3 ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತು ಹಾಗೂ ಅಕ್ರಮ ಪಿಸ್ತೂಲ್ ಸಾಗಾಟ /ಮಾರಾಟಕ್ಕೆ ಸಂಬಂಧಪಟ್ಟಂತೆ ಕೇರಳ- ಕರ್ನಾಟಕ ರಾಜ್ಯಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ 5 ಮಂದಿ ಕುಖ್ಯಾತ ಅಂತಾರಾಜ್ಯ ಕ್ರಿಮಿನಲ್ ಗಳನ್ನು ದಸ್ತಗಿರಿ ಮಾಡಿ 3 ಪಿಸ್ತೂಲ್ ಗಳು, 6 ಸಜೀವ ಮದ್ದುಗುಂಡುಗಳು ಹಾಗೂ 12,895 ಕೆಜಿ ಗಾಂಜಾ, 3 ಕಾರು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣ-1

ದಿನಾಂಕ: 12-03-2025 ರಂದು ಮಂಗಳೂರು ನಗರದ ನಾಟಿಕಲ್ ಪರಿಸರದಲ್ಲಿ KL-14-G-9000 ಸ್ಕಾರ್ಪಿಯೋ ಕಾಡೊಂದು ಅನುಮಾನತ್ವದ ರೀತಿಯಲ್ಲಿ ತಿರುಗಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಕಾರಿನಲ್ಲಿದ್ದ 1. ಸೌರಲ್(18), ತಂದೆ: ಮುಸ್ತಾಫ, ದಾಸ: ಕಲ್ಮಾಡಿರಗತ್ ಹೌಸ್, ಕುಚ್ಚು೦ಕ್ಕೆ ಬೆಸ್ಟ್ ಎಲ್‌ರಿ ಪೋಸ್ಟ್ ಬೀದ ನರಿ ಗ್ರಾಮ ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ

2. ಮನ್ಸೂರ್(36), ಚಂಡೆ: ಅಬ್ದುಲ್ ರೆಹಮಾನ್, ವಾಸ: ಸುಂಕದಕಟ್ಟೆ ಹೌಸ್,ಪೋಸ್ಟ್ ಕುರ್ದಪದವು, ಪೈವಳಿಕೆ ಗ್ರಾಮ, ಕಾಸರಗೋಡು ಜಿಲ್ಲ, ಕೇರಳ ರಾಜ್ಯ ಎಂಬವರನ್ನು ದಸ್ತಗಿರಿ ಮಾಡಿ ಅವರ ವಶದಿಂದ 2 ಪಿಸ್ತೂಲ್ ಗಳು, 4 ಸಜೀವ ಮದ್ದುಗುಂಡುಗಳು, ಮೊಬೈಲ್ ಪೋನಗಳು-2, ಹಾಗೂ KL-14-G-9080 ಸ್ಕಾರ್ಪಿಯೋ ಕಾರನ್ನು ವಶಪಡಿಸಿಕೊಳ್ಳಲಾಗಿರುತ್ತದೆ, ವಶಪಡಿಸಿಕೊಂಡ ಸೊತ್ತಿನ ಅಂದಾಜು ಮೌಲ್ಯ 14,60,000/- ಆಗಬಹುದು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿ ಸೌಫಲ್ ಎಂಬಾತನ ವಿರುದ್ಧ ಈ ಹಿಂದೆ ಕೇರಳ ರಾಜ್ಯದ ವಿವಿಧ ಪೊಲೀಸ್ ಥಾಣೆಗಳಲ್ಲಿ ಮಾದಕ ವಸ್ತು ಸಾಗಾಟ/ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಮನ್ಸೂರ್ ಎಂಬಾತನ ವಿರುದ್ಧ ಕೇರಳದ ವಿವಿಧ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣ ಸೇರಿದಂತೆ ಒಟ್ಟು 4 ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣ-2

ದಿನಾಂಕ: 17-02-2025 ರಂದು ಕೇರಳದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಕೆಂಪು ಬಣ್ಣದ ಕಾರೊಂದರಲ್ಲಿ ಸಾಗಾಟ ಮಾಡಿಕೊಂಡು ಮಂಗಳೂರು ನಗರದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಖಚಿ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ನಗರದ ಅರ್ಕುಳದಲ್ಲಿ ಕಾರನ್ನು ಪತ್ತೆ ಹಚ್ಚಿ ಕಾರಿನಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿ

1. ಅಬ್ದುಲ್ ಲತೀಫ್ # ಕೋಕು ತೀನ್‌(21), ತಂದೆ: ದಿ.ಮಹಮ್ಮದ್, ವಿಳಾಸ, ಕೋಟಾ ಹೌಸ್, ಮಂಗಲ್ಪಾಡಿ ಪಂಚಾಯತ್, ಶಿರಿಯಾ ಫೋನ್ಸ್, ಬಂದ್ಯೋಡ್, ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ, ಹಾಲಿ ವಾಸ: ಬಾಡಿಗೆ ಮನೆ, ಕೊಂಡೊಟ್ಟಿ, ಕೊಯೊಕ್ಕೋಡ್ ಏಲ್ ಪೋರ್ಟ ಹತ್ತಿರ, ಕೊಯಿಕ್ಕೋಡ್ ಜಿಲ್ಲೆ,ಎಂಬಾತನನ್ನು ದಸ್ತಗಿರಿ ಮಾಡಿ ಆತನು ಚಲಾಯಿಸುತ್ತಿದ್ದ ಕೆಂಪು ಬಣ್ಣದ ಸ್ವಿಫ್ ಕಾರು ನಂಬ್ರ: KL-10-BC 6518 ರಲ್ಲಿ ನಾಗಾಟ ಮಾಡುತ್ತಿದ್ದ 12.08 ಕೆಜಿ, ಗಾಂಜಾ, ಮೊಬೈಲ್ ಫೋನ್ ಹಾಗೂ ಕಾರನ್ನು ವಾಚರಿಸಿಕೊಳ್ಳಲಾಗಿರುತ್ತದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 15,70,000/- ಆಗಬಹುದು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿ ಅಬ್ದುಲ್ ಲತೀಫ್ ಅಲಿಯಾಸ್ ತೋಶ್ ಲತೀಫ್ ಎಂಬಾತನು ಇತ್ತೀಚೆಗೆ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಶೂಟೌಟ್‌ ಪ್ರಕರಣದಲ್ಲಿ ಭಾಗಿಯಾದ ಅರೋಪಿಗೆ ಪಿಸ್ತೂಲ್ ನ್ನು ನೀಡಿದ ಆರೋಪಿಯಾಗಿರುತ್ತದೆ.ಅಲ್ಲದೇ 2024 ನೇ ಇಸವಿಯಲ್ಲಿ ಉಳ್ಳಾಲದಲ್ಲಿ ದಾಖಲಾದ ಅಕ್ರಮ ಪಿಸ್ತೂಲ್ ಹೊಂದಿದ್ದ ಅರೋಪಿ ಅಸ್ತರ್‌ ಎಂಬಾತನಿಗೂ ಕೂಡಾ ಈತನು ಪಿಸ್ತೂಲ್ ನ್ನು ಮಾರಾಟ ಮಾಡಿದ್ದು, ಈ ಪ್ರಕರಣಗಳಲ್ಲಿ ಈತನು ತರೆದುರೆಸಿಕೊಂಡಿದ್ದನು. ಈತನ ವಿರುದ್ಧ ಈ ಹಿಂದೆ ಕೇರಳ ಹಾಗೂ ಕರ್ನಾಟಕ ರಾಜ್ಯದಲ್ಲಿ ಅಕ್ರಮ ಶಸ್ತಾಸ್ತ್ರ ಕಾಯ್ದೆಯಡಿಯಲ್ಲಿ, ಹಲ್ಲೆ, ದರೋಡೆ, ಕೊಲೆಯತ್ನ, ಕೊಲೆ ಪ್ರಕರಣ ಸೇರಿದಂತೆ ಒಟ್ಟು 13 ಪ್ರಕರಣಗಳು ದಾಖಲಾಗಿರುತ್ತದೆ.

ಪ್ರಕರಣ-3

ದಿನಾಂಕ: 13-03-2025 ರಂದು ಕರ್ನಾಟಕ- ಕೇರಳ ಗಡಿಭಾಗದ ತಲಪಾಡಿ ಪರಿಸರದಲ್ಲಿ ಮಹಾರಾಷ್ಟ್ರ ನಂದಾಣಿ ಸಂಖ್ಯೆ: MH-02-BT-2287 ನೇ ಬಿಳಿ ಬಣ್ಣದ ವೋಕ್ಸ್ ವ್ಯಾಗನ್ ಫೋಟೋ ಕಾರಿನಲ್ಲಿ ಆರೋಪಿಗಳಿಬ್ಬರು ಯಾವುದೋ ಕೃತ್ಯವೆಸಗಲು ಸಂಚು ರೂಫಿಸಿ ತಿರುಗಾಡಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ ದೇವಿಪುರದ ಬಳಿ ಕಾರನ್ನು ಪತ್ತೆ ಹಚ್ಚಿ ಆರೋಪಿಗಳಾದ 1. ಮೊಹಮ್ಮದ್ ಅಸ್ಕರ್(27), ತಂದೆ: ದಿ: ಉಮ್ಮರ್, ವಾಸ: ಮೊರ್ತಾನ ಮನೆ, ಮೊರ್ತಾನ, ಕಡಂಬಾರ್ ಅಂಚೆ, ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ 2. ಮೊಹಮ್ಮದ್ ಸಾಲಿ(31), ತಂದೆ: ಮೊಹಮ್ಮದ್, ವಾಸ,ಮೊರ್ತಾನ ಮನೆ, ಮೊರ್ತಾನ, ಕಡಂಬಾರ್, ಅಂಚೆ, ಕಾಸರಗೋಡು ಜಿಲ್ಲೆ, ಕೇರಳ ರಾಜ್ಯಎಂಬವರನ್ನು ಪತ್ತೆ ಹಚ್ಚಿ ಆರೋಪಿಗಳ ವಶದಿಂದ ಪಿಸ್ತೂಲ್-1, ಸಜೀವ ಮದ್ದುಗುಂಡುಗಳು-2, ಮೊಬೈಲ್ ಫೋನುಗಳು- 2 ಹಾಗೂ MH-02-BT-2287 ನೇ ವೋಕ್ಸ್ ವ್ಯಾಗನ್ ಪೋಲೋ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಅಂದಾಜು ಮೌಲ್ಯ ರೂ. 10,20,000/- ಅಗಬಹುದು. ಈ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳ ಪೈಕಿ ಮೊಹಮ್ಮದ್ ಅಸ್ಲರ್ ಎಂಬಾತನ ವಿರುದ್ಧ ಹಲ್ಲೆ, ದರೋಡ, ಕೊಲೆಯತ್ನ ಹಾಗೂ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಕೇರಳ ಹಾಗೂ ಕರ್ನಾಟಕ ರಾಜ್ಯದಲ್ಲಿ ಒಟ್ಟು 17 ಪ್ರಕರಣಗಳು ದಾಖಲಾಗಿರುತ್ತದೆ.

ಇನ್ನೋರ್ವ ಆರೋಪಿ ಮೊಹಮ್ಮದ್ ಸಾಲಿ ಎಂಬಾತನ ವಿರುದ್ಧ ಮಂಜೇಶ್ವರ ಪೊಲೀಸ್‌ ಠಾಣೆಯಲ್ಲಿ ಮಾದಕ ವಸ್ತು ಮಾರಾಟ, ಹಲ್ಲೆ, ಕೊಲೆ ಯತ್ನ, ಅಕ್ರಮ ಮರಳು ಸಾಗಾಟಕ್ಕೆ ಸಂಬಂಧಪಟ್ಟಂತ ಒಟ್ಟು 10 ಪ್ರಕರಣಗಳು ದಾಖಲಾಗಿರುತ್ತದೆ.ಮೇಲ್ಕಂಡ 3 ಪ್ರಕರಣಗಳಲ್ಲಿ ಒಟ್ಟು 3 ಪಿಸ್ತೂಲ್ ಗಳು, ಸಜೀವ ಮದ್ದುಗುಂಡುಗಳು-6, 12.895 ಕೆಜಿ ಗಾಂಜಾ, 5 ಮೊಬೈಲ್ ಫೋನುಗಳು ಹಾಗೂ 3 ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ. 40,50,000/- ಆಗಬಹುದು. ಈ ಪ್ರಕರಣಗಳಲ್ಲಿ ಇನ್ನೂ ಹಲವಾರು ಮಂದಿ ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಈ ಪ್ರಕರಣಗಳ ಪತ್ತೆ ಕಾರ್ಯವನ್ನು ಮಾನ್‌ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗ್ರವಾಲ್ IPS ರವರ ಮಾರ್ಗದರ್ಶನದಲ್ಲಿ, ಉಪ ಪೊಲೀಸ್ ಆಯುಕ್ತರು( ಕಾನೂನು & ಸುವ್ಯವಸ್ಥೆ ವಿಭಾಗ) ರವರಾದ ಶ್ರೀ ಸಿದ್ಧಾರ್ಥ ಗೋಯಲ್, IPS ಮತ್ತು ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ ವಿಭಾಗ) ರವರಾದ ಶ್ರೀ ಕೆ. ರವಿಶಂಕರ್, KSPS ರವರ ನಿರ್ದೇಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್‌ ಕುಮಾರ್ ನಾಯ್ಕ ರವರ ನೇತೃತ್ವದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ, ಪಿಎಸ್‌ಐ ಶರಣಪ್ಪ ಭಂಡಾರಿ ಹಾಗೂ ಎಎಸ್‌ಐ ಯವರಾದ ಮೋಹನ್ ಕ ವಿ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!