Sunday, April 28, 2024
Homeಕರಾವಳಿಬೆಳ್ತಂಗಡಿ : ನಾಳೆ ಧರ್ಮಸ್ಥಳದ ಧರ್ಮಾಧಿಕಾರಿಗಳ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ ಆಚರಣೆ!

ಬೆಳ್ತಂಗಡಿ : ನಾಳೆ ಧರ್ಮಸ್ಥಳದ ಧರ್ಮಾಧಿಕಾರಿಗಳ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ ಆಚರಣೆ!

spot_img
- Advertisement -
- Advertisement -

ಬೆಳ್ತಂಗಡಿ: ಅ. 24 ರವಿವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ ಆಚರಣೆ ಸರಳವಾಗಿ ನಡೆಯಲಿದೆ.

ಆ ದಿನ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಹಾಗೂ ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜೆ ನೆರವೇರಲಿದೆ. ಮಹೋತ್ಸವ ಸಭಾಭವನದಲ್ಲಿ ಸಂಜೆ 5ಕ್ಕೆ ನಡೆಯುವ ಸಮಾರಂಭದಲ್ಲಿ ತುಮಕೂರಿನ ನಿವೃತ್ತ ಜಿಲ್ಲಾಧಿಕಾರಿ ಸಿ. ಸೋಮಶೇಖರ್‌ ಅಭಿನಂದನ ಭಾಷಣ ಮಾಡುವರು. ಆ ಬಳಿಕ ಡಾ| ಹೆಗ್ಗಡೆಯವರು ಮುಂದಿನ ವರ್ಷದ ಹೊಸ ಯೋಜನೆಗಳನ್ನು ಪ್ರಕಟಿಸುವರು.

ಹಿರಿಯ ನೌಕರರಾದ ಶುಭಚಂದ್ರರಾಜ ಮತ್ತು ತೋಟಗಾರಿಕಾ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಪೂಜಾರಿ ಅವರನ್ನು ಹೆಗ್ಗಡೆಯವರು ಸಮ್ಮಾನಿಸುವರು.ತನ್ನ 20ನೇ ವಯಸಿನಲ್ಲಿ 1968ರ ಅ. 24ರಂದು ನೆಲ್ಯಾಡಿಬೀಡಿನಲ್ಲಿ 21ನೇ ಧರ್ಮಾಧಿಕಾರಿಯಾಗಿ ತನ್ನ ಪಟ್ಟಾಭಿಷಿಕ್ತರಾದ ಡಾ| ವೀರೇಂದ್ರ ಹೆಗ್ಗಡೆಯವರು ಅಪೂರ್ವ ಸಾಧನೆಗಳ ಮೂಲಕ ಧರ್ಮಸ್ಥಳವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ.

ವಿನೂತನ ಯೋಜನೆಗಳ ಮೂಲಕ ಡಾ| ಹೆಗ್ಗಡೆಯವರ ಚಿಂತನ-ಮಂಥನದಿಂದ ಯಶಸ್ವಿಯಾಗಿ ಲೋಕಕಲ್ಯಾಣಕ್ಕಾಗಿ ಅನೇಕಾನೇಕ ಸೇವಾ ಕಾರ್ಯಗಳು ಮೂಡಿಬಂದಿವೆ. ಅವರ ಕೆಲವು ಯೋಜನೆಗಳಿಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಮಾನ್ಯತೆ ನೀಡಿ ಅನುಷ್ಠಾನಗೊಳಿಸಿವೆ.

- Advertisement -
spot_img

Latest News

error: Content is protected !!