- Advertisement -
- Advertisement -
ಬೆಂಗಳೂರು: ತುಮಕೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವು ಕಂಡ ಕಾರ್ಮಿಕರ ಕುಟುಂಬಸ್ಥರು, ಪ್ರೀತಿ ಪಾತ್ರರ ಸಾವಿನ ವೇಳೆಯಲ್ಲೂ ಸಾರ್ಥಕಥೆ ಮೆರೆದಿದ್ದಾರೆ. 6 ಮಂದಿಯ ಕುಟುಂಬಸ್ಥರು ನೇತ್ರದಾನ ಮಾಡುವ ಮೂಲಕ ಇನ್ನೊಬ್ಬರ ಬಾಳಿಗೆ ಬೆಳಕಾಗಿದ್ದಾರೆ.
ಗುರುವಾರ ಬೆಳಗ್ಗೆ ಶಿರಾದಲ್ಲಿ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಕಾರ್ಮಿಕರು ಸಾವು ಕಂಡಿದ್ದರು. ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ಬಳಿಕ ಇವರ ನೇತ್ರದಾನ ಮಾಡಲಾಗಿದೆ. ಅಪಘಾತದಲ್ಲಿ ಮೃತರಾದ ಇಬ್ಬರು ಮಹಿಳೆಯರು ಒಂದು ಮಗು ಹಾಗೂ ಮೂವರು ಪುರುಷರು ಕಣ್ಣುಗಳನ್ನು ದಾನ ಮಾಡಲಾಗಿದೆ. ಕ್ರೂಸರ್ ಚಾಲಕನ ನಿರ್ಲಕ್ಷ್ಯದಿಂದಾಗಿ 9 ಮಂದಿ ಬಡ ಜೀವಗಳು ಬಲಿಯಾಗಿದ್ದವು.
- Advertisement -