ಮಂಗಳೂರು: ಇಂಗ್ಲೆಂಡ್ನಲ್ಲಿ ರೂಪಾಂತರಿತ ಕೊರೊನಾ ಸೋಂಕು ಕಾಣಿಸಿಕೊಂಡಿರೋದರಿಂದ ವಿಶ್ವದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ದೇಶಾದ್ಯಂತ ಈ ಬಗ್ಗೆ ನಿಗಾ ವಹಿಸಲಾಗಿದೆ.
ಹೀಗಿರುವಾಗಲೇ ಬ್ರಿಟನ್ ನಿಂದ ಮತ್ತೆ ಎಂಟು ಮಂದಿ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ್ದಾರೆ. ಈ ಎಲ್ಲರನ್ನೂ ಇದೀಗ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಈ ಎಂಟು ಮಂದಿಯ ವರದಿ ಮುಂದಿನ ಶುಕ್ರವಾರ ಬರಲಿದೆ. ಬ್ರಿಟನ್ನಿಂದ ಜಿಲ್ಲೆಗೆ ಆಗಮಿಸಿದ ಎಲ್ಲರ ಪರೀಕ್ಷೆ ನಡೆಸಲಾಗಿದ್ದು, ಎಲ್ಲರ ವರದಿಯೂ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ. ಈ ಮೊದಲು ಬ್ರಿಟನ್ನಿಂದ 66 ಮಂದಿ ದ.ಕ. ಜಿಲ್ಲೆಗೆ ಬಂದಿದ್ದರು. ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಬೇಕೆದ್ದರೆ ಆರ್ಟಿಪಿಸಿಆರ್ ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಬೇಕಿದೆ.
ಇದರ ಜತೆಗೆ ಇಂಗ್ಲೆಂಡ್ನಲ್ಲಿ ಕೋವಿಡ್-19 ಸೋಂಕಿನ ಹೊಸ ತಳಿಯ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಂಗ್ಲೆಂಡ್ನಿಂದ ಭಾರತಕ್ಕೆ ಬರುವ ಎಲ್ಲ ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಪಡಿಸಲಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟನೆ ತಿಳಿಸಿದೆ.