- Advertisement -
- Advertisement -
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ಇಂದು ಮಂಗಳೂರಿನಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಪಾಲ್ಗೊಂಡಿದ್ದರು.
ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಂಗಳೂರು ನಗರದ ಕೆರೆಗಳ ಅಭಿವೃದ್ಧಿ ಹಾಗೂ ಸಂರಕ್ಷಣೆ ಸೇರಿದಂತೆ ಕೈಗೆತ್ತಿಕೊಂಡಿರುವ ಕಾಮಗಾರಿಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
ಸಭೆಯಲ್ಲಿ ಮುಡಾ ಅಧಿಕಾರಿಗಳು ಸೇರಿದಂತೆ ಇತರ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕೂಡಾ ಪಾಲ್ಗೊಂಡಿದ್ದರು.
- Advertisement -