Sunday, May 19, 2024
Homeತಾಜಾ ಸುದ್ದಿಮನೆ ಜಪ್ತಿಯ ಭಯದಲ್ಲಿದ್ದಾತನ ಕೈ ಹಿಡಿದ ಕೇರಳ ಲಾಟರಿ; 70 ಲಕ್ಷ ಗೆದ್ದ ದೇವರನಾಡಿನ ಮೀನುಗಾರ

ಮನೆ ಜಪ್ತಿಯ ಭಯದಲ್ಲಿದ್ದಾತನ ಕೈ ಹಿಡಿದ ಕೇರಳ ಲಾಟರಿ; 70 ಲಕ್ಷ ಗೆದ್ದ ದೇವರನಾಡಿನ ಮೀನುಗಾರ

spot_img
- Advertisement -
- Advertisement -

ಕೇರಳ: ಕೆಲಮೊಮ್ಮೆ ಬೆಟ್ಟದಷ್ಟು ದೊಡ್ಡ ಸಮಸ್ಯೆ ಹೂ ತೆಗೆದಂತೆ ಹೇಗೆ ಸುಲಭವಾಗಿ ಪರಿಹಾರವಾಗುತ್ತೆ ಅಂತಾ ಹೇಳೋದಕ್ಕೆ ಸಾಧ್ಯಾನೇ ಇಲ್ಲ. ಇಲ್ಲೊಬ್ಬ ವ್ಯಕ್ತಿಯ ಬಾಳಲ್ಲೂ ಅದೃಷ್ಟ ದೇವತೆ ಅದೇ ರೀತಿ ಜಾದೂ ಮಾಡಿದ್ದಾಳೆ.

ಕೇರಳದ ಮೀನುಗಾರ ಪೂಕುಂಞುಗೆ ಬ್ಯಾಂಕ್ ನಿಂದ ಸಾಲ ಪಡೆದಿದ್ದರು. ಸಾಲ ಮರುಪಾವತಿ ಮಾಡಲು ಸಾಧ್ಯವಾಗದೇ ಇದ್ದಾಗ ಬ್ಯಾಂಕ್‌ನಿಂದ ಜಪ್ತಿ ನೋಟಿಸ್ ಬಂದಿತ್ತು. ಬ್ಯಾಂಕ್ ನೋಟಿಸ್ ಬಂದ ತಲೆ ಬಿಸಿಯಲ್ಲಿರುವಾಗಲೇ ಭಾಗ್ಯ ದೇವತೆ ಬಂದು ಅವರ ಕದ ತಟ್ಟಿದ್ದಾಳೆ.

ರಾಜ್ಯ ಸರ್ಕಾರದ 70 ಲಕ್ಷ ರೂಪಾಯಿ ಅಕ್ಷಯ ಲಾಟರಿ ಪೂಕುಂಞುಗೆ ಒಲಿದಿದೆ. ಅಕ್ಟೋಬರ್ 12 ರಂದು ಪೂಕುಂಞು ಅವರು ಮೀನು ಹಿಡಿಯಲು ಲಾಟರಿ ಖರೀದಿಸಿದ್ದು ಮೊದಲ ಬಹುಮಾನ 70 ಲಕ್ಷ ರೂಪಾಯಿಯನ್ನು ಅವರು ಗೆದ್ದಿದ್ದಾರೆ. ಮಧ್ಯಾಹ್ನ ಮನೆಗೆ ಹಿಂದಿರುಗಿದಾಗ ಸುಮಾರು 9 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿಸಲು ಸಾಧ್ಯವಾಗದ ಕಾರಣ ಬ್ಯಾಂಕ್ ತನ್ನ ಮನೆಗೆ ಸಂಬಂಧಿಸಿದಂತೆ ಜಪ್ತಿ ನೋಟಿಸ್ ಕಳುಹಿಸಿದೆ ಎಂದು ತಿಳಿದುಬಂದಿದೆ.

“ಬ್ಯಾಂಕ್‌ನಿಂದ ನೋಟಿಸ್ ಬಂದ ನಂತರ ನಾವು ಬೇಸರದಲ್ಲಿದ್ದೆವು. ನಮಗೆ ಏನು ಮಾಡಬೇಕೆಂದು ತಿಳಿಯಲಿಲ್ಲ. ನಮ್ಮ ಆಸ್ತಿಯನ್ನು ಮಾರಾಟ ಮಾಡಬೇಕಾಗುತ್ತದೆಯೇ ಎಂದು ನಾವು ಯೋಚಿಸುತ್ತಿದ್ದೆವು” ಎಂದು ಪೂಕುಂಞು ಅವರ ಹೆಂಡತಿ ಹೇಳಿದ್ದಾರೆ.

ನೋಟಿಸ್ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ಲಾಟರಿಯ ವಿಜೇತ ಸಂಖ್ಯೆಯನ್ನು ಘೋಷಿಸಿದಾಗ ನಮಗೆ ಮೊದಲ ಬಹುಮಾನ ಬಂದಿತ್ತು ಅಂತಾರೆ ಈ ಮೀನುಗಾರರ ಕುಟುಂಬ. ಕೆಲವೇ ಗಂಟೆಗಳ ಹಿಂದೆ ಸಾಲದ ಸುಳಿಯಲ್ಲಿ ಸಿಲುಕಿದ್ದ ವ್ಯಕ್ತಿ ಲಕ್ಷಾಧಿಪತಿಯಾಗಿದ್ದಾರೆ. ಮೊದಲು ಎಲ್ಲಾ ಸಾಲಗಳನ್ನು ತೀರಿಸಬೇಕು. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಇದರಿಂದ ಅವರು ಜೀವನ ಉತ್ತಮವಾಗುತ್ತದೆ ಎಂದು ದಂಪತಿ ಹೇಳಿದ್ದಾರೆ.

- Advertisement -
spot_img

Latest News

error: Content is protected !!