- Advertisement -
- Advertisement -
ಚಿಕ್ಕಮಗಳೂರು: ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿಗೆ ಚಾಲನೆ ನೀಡಲಾಗಿದೆ.
ದತ್ತ ಮಾಲಾಧಾರಣೆ ಮಾಡುವ ಮೂಲಕ ದತ್ತ ಜಯಂತಿಗೆ ಚಾಲನೆ ನೀಡಲಾಗಿದ್ದು, ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಮಾಲಾಧಾರಣೆ ಮಾಡಲಾಗಿದೆ.
ಇಂದಿನಿಂದ ಡಿಸೆಂಬರ್ 8 ರವರೆಗೆ ದತ್ತ ಜಯಂತಿ ನಡೆಯಲಿದ್ದು, ಶಾಸಕ ಸಿ.ಟಿ. ರವಿ ಸೇರಿ ಹಲವರಿಂದ ಮಾಲಾಧಾರಣೆ ನಡೆದಿದೆ.
ಚಿಕ್ಕಮಗಳೂರು ನಗರದಲ್ಲಿ 100 ಕ್ಕೂ ಹೆಚ್ಚು ಭಕ್ತರಿಂದ ಮಾಲಾಧಾರಣೆ ಮಾಡಲ್ಪಟ್ಟಿದ್ದು, ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತ ಜಯಂತಿ ನಡೆಯಲಿದೆ.
- Advertisement -