Friday, June 5, 2026
Homeತಾಜಾ ಸುದ್ದಿಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ ಹಿನ್ನೆಲೆ: ಹಿಂಡಲಗಾ ಜೈಲಿನಲ್ಲಿ ಖೈದಿಯ ತೀವ್ರ...

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ ಹಿನ್ನೆಲೆ: ಹಿಂಡಲಗಾ ಜೈಲಿನಲ್ಲಿ ಖೈದಿಯ ತೀವ್ರ ವಿಚಾರಣೆ

- Advertisement -
- Advertisement -

ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನಲ್ಲಿ ಖೈದಿಯನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ-ಮಹಾರಾಷ್ಟ್ರ ಪೊಲೀಸರು ಜೈಲಿನೊಳಗೆ ಮೊಬೈಲ್ ಫೋನ್ ತಲುಪಿದ್ದು ಹೇಗೆ ಎಂಬ ಬಗ್ಗೆ ತೀವ್ರ ತನಿಖೆ ನಡೆಸುತ್ತಿದ್ದಾರೆ. ಸದ್ಯ ಹಿಂಡಲಗಾ ಜೈಲಿನಲ್ಲಿ ತೀವ್ರ ಕಾರ್ಯಾಚರಣೆ ಮಾಡುತ್ತಿರುವ ಪೊಲೀಸರು ಸದ್ಯ ಜಯೇಶ್ ಪೂಜಾರಿ ಎಂಬ ಕೈದಿ ಫೋನ್ ಕರೆ ಮಾಡಿರುವ ಶಂಕೆಯಡಿ ವಿಚಾರಣೆ ನಡೆಸುತ್ತಿದ್ದಾರೆ. ನಿತಿನ್ ಗಡ್ಕರಿಗೆ ಕರೆ ಮಾಡಿದ ಮೊಬೈಲ್‌ಗಾಗಿ ಪೊಲೀಸರ ಶೋಧ ನಡೆಸಿದ್ದಾರೆ.

- Advertisement -

Latest News

error: Content is protected !!