- Advertisement -
- Advertisement -
ಬೆಂಗಳೂರು: ಬೆಳ್ತಂಗಡಿ ಯುವ ವಕೀಲ ಕುಲದೀಪ್ ಶೆಟ್ಟಿ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಸಂತ್ರಸ್ತ ವಕೀಲರಿಗೆ 3 ಲಕ್ಷ ರೂ ಪರಿಹಾರ ನೀಡುವಂತೆ ಪೊಲೀಸರಿಗೆ ಹೈಕೋರ್ಟ್ ಆದೇಶಿಸಿದೆ.
ತನ್ನ ಮೇಲೆ ದೌರ್ಜನ್ಯ ಎಸಗಿದ ಪುಂಜಾಲಕಟ್ಟೆ ಸಬ್ ಇನ್ಸ್ಪೆಕ್ಟರ್ ಕೆ.ಪಿ ಸುತೇಶ್ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ತಮಗೆ ಪರಿಹಾರ ಒದಗಿಸಬೇಕು ಎಂದು ಕೋರಿ ಯುವ ವಕೀಲ ಕುಲದೀಪ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ ಆದೇಶವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಪ್ರಕಟಿಸಿದೆ.
- Advertisement -