ಕಾರ್ಕಳ : ತಮ್ಮನ ಮನೆಗೆ ಬೆಂಕಿಯಿಟ್ಟು, ತಾನು ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಅಣ್ಣನೊಬ್ಬ ಸಾವನ್ನಪ್ಪಿದ ಘಟನೆ ಕಾರ್ಕಳದ ಸಚ್ಚೇರಿಪೇಟೆಯಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ. ಸಚ್ಚೇರಿಪೇಟೆಯ ಕೃಷ್ಣ ಸಪಳಿಗ ಮೃತ ದುರ್ದೈವಿ.
ಕೃಷ್ಣ ಸಪಳಿಗ ತನ್ನ ತನಮ್ಮ ಶೇಖರ ಸಪಳಿಗ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತಾನು ತನ್ನ ಓಮ್ನಿ ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾನೆ.
ಕೃಷ್ಣ ನ ಸಹೋದರ ಶೇಖರ ಅವರ ಮನೆಯಲ್ಲಿ ಕೃಷ್ಣ ಹಾಗೂ ಶೇಖರ ಅವರ ಮಗಳ ಮೆಹಂದಿ ಕಾರ್ಯಕ್ರಮ ನಡೆಯುತ್ತಿತ್ತು. ಎಲ್ಲರೂ ಈ ಸಂಭ್ರಮದಲ್ಲಿರುವಾಗ ಮೂರು ಗಂಟೆಗೆ ಕೃಷ್ಣ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಆಸ್ತಿ ವಿತಾರವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ.ಅಗ್ನಿಶಾಮಕ ದಳದವರ ಸಹಿತ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.ಕೃತ್ಯಕ್ಕೆ ಮುನ್ನ ಕೃಷ್ಣ ಡೆತ್ ನೋಟ್ ಬರೆದು ಕಾಂಪೌಂಡ್ ಗೋಡೆಗೆ ಅಂಟಿಸಿದ್ದು, ಹಲವರ ಹೆಸರು ಉಲ್ಲೇಖಿಸಲಾಗಿದೆ.