- Advertisement -
- Advertisement -
ಉಡುಪಿ: ಸರ್ಕಾರ ಮದ್ಯಪಾನದ ವಯೋಮಿತಿಯನ್ನು 21ರಿಂದ 18ಕ್ಕೆ ಇಳಿಸಿದನ್ನ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಖಂಡಿಸಿದ್ದಾರೆ.
ಇದು ನಿಜಕ್ಕೂ ಆಘಾತಕಾರಿಯಾದ ವಿಚಾರ. ಮದ್ಯಪಾನ ನಿಷೇಧ ಮಾಡುವುದರ ಮೊದಲು, ಸರ್ಕಾರ ಮದ್ಯಪಾನಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡುವ ನಿರ್ಣಯ ಕೈಗೊಂಡಿರೋದು ನಿಜಕ್ಕೂ ಅಕ್ಷಮ್ಯ ಅಪರಾಧ. ಈ ಕೂಡಲೇ ಸರ್ಕಾರ ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ರು.
- Advertisement -