Saturday, June 28, 2025
Homeಕರಾವಳಿಧರ್ಮಸ್ಥಳ ತಲುಪಿದ ಗೋಕಾಕ್ ರಾಜಕಾರಣ!: ಮಂಜುನಾಥನ ಸನ್ನಿಧಿಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಪ್ರಮಾಣ!

ಧರ್ಮಸ್ಥಳ ತಲುಪಿದ ಗೋಕಾಕ್ ರಾಜಕಾರಣ!: ಮಂಜುನಾಥನ ಸನ್ನಿಧಿಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಪ್ರಮಾಣ!

spot_img
- Advertisement -
- Advertisement -

ಧರ್ಮಸ್ಥಳ: ಚುನಾವಣೆಯಲ್ಲಿ ಹಣ ಪಡೆದು ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ‌ಬೆಳಗಾವಿ ಜಿಲ್ಲಾ ರಾಜಕಾರಣ ಧರ್ಮಸ್ಥಳ ಮಂಜುನಾಥ‌ ಸ್ವಾಮಿಯ ಸನ್ನಿಧಿಗೆ ತಲುಪಿದೆ.

ಗೋಕಾಕ್ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿರುವ ಅಶೋಕ್ ಪೂಜಾರಿ ಧರ್ಮಸ್ಥಳದಲ್ಲಿ ಕಾರ್ಯಕರ್ತರೊಂದಿಗೆ ಬಂದು ಪ್ರಮಾಣ ಮಾಡಿದ್ದಾರೆ.

ಗೋಕಾಕ್ ಶಾಸಕ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೋಳಿ ಮತ್ತು ಬೆಂಬಲಿಗರು ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ
ಇಂದು ಧರ್ಮಸ್ಥಳಕ್ಕೆ ಬಂದು ಹಣದ ಅಮಿಷಕ್ಕೆ ಒಳಗಾಗಿಲ್ಲ ಎಂದು ಆಣೆ ಪ್ರಮಾಣ ಮಾಡಿದ್ದಾರೆ.

ಸಾಕಷ್ಟು ಜನ ಕಾರ್ಯಕರ್ತರೊಂದಿಗೆ ಧರ್ಮಸ್ಥಳಕ್ಕೆ ಬಂದು ಅಶೋಕ್ ಪೂಜಾರಿ ಆಣೆ ಪ್ರಮಾಣ ಮಾಡಿದ್ದಾರೆ.

2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೋಕಾಕ್ ಕ್ಷೇತ್ರದಿಂದ ಸ್ಫರ್ಧಿಸಿದ್ದ ಅಶೋಕ್ ಪೂಜಾರಿ, ಅನಂತರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

- Advertisement -
spot_img

Latest News

error: Content is protected !!