- Advertisement -
![]()
- Advertisement -
ಕುಂದಾಪುರ: ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಅರೆಬೈಲು ಸತೀಶ ದೇವಾಡಿಗ ಎಂಬುವವರ ಮನೆಯಲ್ಲಿ ನಿನ್ನೆ ಸಾಕು ನಾಯಿಯ ಮೇಲೆ ದಾಳಿ ಮಾಡಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಇಂದು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ತೆಕ್ಕಟ್ಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಲಾಡಿ ಸಮೀಪದ ತೋಪಿನಲ್ಲಿ ಇಟ್ಟಿದ್ದ ಬೋನಿನಲ್ಲಿ ಗಂಡು ಚಿರತೆ ಇಂದು ಬೆಳಿಗ್ಗೆ ಸೆರೆಯಾಗಿದೆ. ಈ ಮೂಲಕ ಗ್ರಾಮಸ್ಥರ ಆತಂಕ ದೂರ ಆಗಿದೆ.
- Advertisement -


