Friday, June 5, 2026
Homeಕರಾವಳಿಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲಡಿ ಹಾಕಿ‌ ತುಳಿಯುತ್ತಾರೆ ಎಂದು ಶಾಸಕ ಭರತ್ ಶೆಟ್ಟಿ ಹೇಳಿಕೆ...

ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲಡಿ ಹಾಕಿ‌ ತುಳಿಯುತ್ತಾರೆ ಎಂದು ಶಾಸಕ ಭರತ್ ಶೆಟ್ಟಿ ಹೇಳಿಕೆ ವಿಚಾರ;ಇದು ಸತ್ಯವೇ ಆಗಿದ್ದರೆ ಧರ್ಮಸ್ಥಳ ಅಥವಾ ದರ್ಗಾದಲ್ಲಿ  ಭರತ್ ಶೆಟ್ಟಿ ಆಣೆ ಮಾಡಲಿ; ಎಂದು‌ ಮಾಜಿ ಶಾಸಕ ಮೊಯ್ದೀನ್ ಬಾವಾ ಸವಾಲು

- Advertisement -
- Advertisement -

ಮಂಗಳೂರು: ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲ ಕೆಳಗೆ ಹಾಕಿ‌ ತುಳಿಯುತ್ತಾರೆ ಎಂದು ಶಾಸಕ ಡಾ| ಭರತ್ ‌ಶೆಟ್ಟಿ‌ ಅವರು ಹೇಳಿದ್ದಾರೆ. ಇದು ಸತ್ಯವೇ ಆಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಅಥವಾ ದರ್ಗಾ ದಲ್ಲಿ ಆಣೆ ಮಾಡಲಿ, ನಾನು ಬರುತ್ತೇನೆ ಎಂದು‌ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ಶಾಸಕ ಭರತ್ ಶೆಟ್ಟಿಯವರಿಗೆ ಸವಾಲು ಹಾಕಿದ್ದಾರೆ.

ಮಂಗಳವಾರ ಸುದ್ದಿಗೋಷ್ಟಿ‌ ನಡೆಸಿ ಮಾತನಾಡಿದ ಅವರು, ನನಗೆ ಬಾಲ್ಯದಲ್ಲಿ‌ ಹೆತ್ತವರು ಸಂಸ್ಕಾರ ಕಲಿಸಿದ್ದಾರೆ. ಇತರ ಧರ್ಮದ ಬಗ್ಗೆ ಗೌರವ ಕೊಡಲು ಕಲಿಸಿಕೊಟ್ಟಿದ್ದಾರೆ. ‌ಎಲ್ಲಿ ಯಾವಾಗ ಪ್ರಸಾದವನ್ನು ತುಳಿದಿದ್ದೇನೆ ಎಂದು ಹೇಳಬೇಕು ಎಂದಿದ್ದಾರೆ.

ಗಣೇಶಪುರ ದೇಗುಲಕ್ಕೆ ಬಜೆಟ್ ನಲ್ಲಿ ಬಂದ 58 ಕೋಟಿ ರೂ.ನಲ್ಲಿ ಕಮಿಷನ್ ಪಡೆಯುವ ಉದ್ದೇಶದಿಂದ 40 ಕೋಟಿಯನ್ನು ವಾರ್ಡ್ ಗಳಿಗೆ ಹಂಚಿದ್ದಾರೆ. ಇದರ ಗುತ್ತಿಗೆಗಳನ್ನು ಮುಸ್ಲಿಂ ಗುತ್ತಿಗೆದಾರರಿಗೆ‌ ಕೊಟ್ಟು ಕಮಿಷನ್ ಪಡೆದಿರುವುದಕ್ಕೆ ಸಾಕ್ಷಿ ಇದೆ. ಬಹಿರಂಗವಾಗಿ ಚರ್ಚೆಗೆ ಬಂದರೆ ಯಾರಿಂದ ಕಮಿಷನ್ ಪಡೆದಿದ್ದೀರಿ ಎನ್ನುವುದನ್ನು ಬಹಿರಂಗ ಪಡಿಸುತ್ತೇನೆ‌ ಎಂದು ಸವಾಲು ಹಾಕಿದ್ದಾರೆ.

ಮೊಯ್ದೀನ್ ಬಾವಾ ನೀಡುವ ಚೆಕ್ ಬೌನ್ಸ್ ಆಗುತ್ತದೆ ಎಂದೂ ಶಾಸಕರು ಹೇಳಿದ್ದು, ಯಾರಿಗೆ ನೀಡಿದ ಚೆಕ್ ಬೌನ್ಸ್ ಆಗಿದೆ ಎಂದು ಸಾಕ್ಷಿ ಸಮೇತ ತಿಳಿಸಿದರೆ 24 ಗಂಟೆಯೊಳಗೆ ಸಾರ್ವಜನಿಕ ಜೀವನದಿಂದ ನಿವೃತ್ತಿ ಆಗುತ್ತೇನೆ ಎಂದಿದ್ದಾರೆ. ತನ್ನನ್ನು ಬಾವಲಿಗೆ ಹೋಲಿಕೆ ಮಾಡಿ ಶಾಸಕರು ಮಾತನಾಡಿದ್ದು, ಒಬ್ಬ ವೈದ್ಯರಾಗಿ ಇಂತಹ ಬಾಲಿಶ ಹೇಳಿಕೆ‌ ನೀಡುವುದನ್ನು ಬಿಡಲಿ. ನಾವು ಬಾವಲಿ ಆಗಿಯಾದರೂ ಕೆಲಸ ಮಾಡುತ್ತೇವೆ.‌ ಕಳೆದ ಬಾರಿ ಹಿಂಬಾಗಿಲಿನಲ್ಲಿ ಶಾಸಕರಾದ ಅವರನ್ನು ಈ ಬಾರಿ ಜನರು ಮನೆಗೆ ಕಳುಹಿಸುವುದು ಖಚಿತ ಎಂದು ಬಾವಾ ತಿಳಿಸಿದ್ದಾರೆ.

- Advertisement -

Latest News

error: Content is protected !!