- Advertisement -
- Advertisement -
ಚಿಕ್ಕಮಗಳೂರು :ಬ್ರೇಕ್ ಡೌನ್ ಆಗಿ ಆಕ್ಸಿಡೆಂಟ್ ಆದ ಕಾರಿನಲ್ಲಿ ಮದ್ಯ, ಲಾಂಗ್, ಸಿ.ಟಿ.ರವಿ ಭಾವಚಿತ್ರವುಳ್ಳ ಕ್ಯಾಲೆಂಡರ್ ಪತ್ತೆಯಟದ ಘಟನೆ ಚಿಕ್ಕಮಗಳೂರಿನಲ್ಲಿ ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ ನಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ.
ಇನ್ನು ಕಾರು ತಳ್ಳಲು ಮುಂದಾದಾಗ ಚಾಲಕ ಹಾಗೂ ಅಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆದಿದೆ.
ಕಾರ್ ನಲ್ಲಿ ಪತ್ತೆಯಾದ ಮದ್ಯ, ಕ್ಯಾಲೆಂಡರ್, ಲಾಂಗ್ ಅನ್ನ ಕಾರಿನಿಂದ ಹೊರತೆಗೆದಿದ್ದಾರೆ ಸ್ಥಳೀಯರು. ಸ್ಥಳೀಯರು ಆಕ್ರೋಶ ಹೊರಹಾಕ್ತಿದ್ದಂತೆ ಕಾರು ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ನಗರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮದ್ಯ ಕ್ಯಾಲೆಂಡರ್ ಹಾಗೂ ಲಾಂಗ್ ನ್ನು ವಶಕ್ಕೆ ಪಡೆದಿದ್ದಾರೆ.
- Advertisement -