- Advertisement -
- Advertisement -
ಬೆಂಗಳೂರು : ಇಂದು ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಿದೆ.ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ ಬೆನ್ನಲ್ಲೇ ನಟ ಉಪೇಂದ್ರ ಮಾಡಿರುವ ಟ್ವೀಟ್ ಎಲ್ಲರ ಗಮನ ಸೆಳೆದಿದೆ. ಒಂದಷ್ಟು ಕಡೆ ಟ್ರೋಲ್ ಕೂಡ ಆಗಿದೆ.
ಮತ ಎಣಿಕೆಗೆ 2 ದಿನಾ ಬೇಕಾ ? ಡಿಜಿಟಲ್ ವೋಟಿಂಗ್ ಅಲ್ವಾ ? ಮತ ಎಣಿಕೆಗೆ 2 ದಿನಾ ಬೇಕಾ ? ನನಗೆ ಗೊತ್ತಿಲ್ಲಾ, ಗೊತ್ತಿದ್ದರೆ ತಿಳಿಸಿ ಅಂದೆ ಅಷ್ಟೇ.. ಅಬ್ಬಬ್ಬಾ ಏನು ಕಾಮೆಂಟ್ಸ್ ಗಳು ?! ವಾರೆ ವಾಹ್ . ವ್ಯಾಪಾರೀ ರಾಜಕೀಯ, ಭ್ರಷ್ಟಾಚಾರ, ಕುದುರೆ ವ್ಯಾಪಾರ ಇದರ ಬಗ್ಗೆ ಕಾಮೆಂಟ್ ಮಾಡಿ ನೋಡೋಣ ಅತಿ ಬುದ್ವಂತ್ರು, ದೇಶ ಪ್ರೇಮಿಗಳು, ರಾಜಕೀಯ ಪಕ್ಷಗಳ ಹಿಂ ಬಾಲಕರು..ಎಂದು ನಟ ಉಪೇಂದ್ರ ಟ್ವೀಟ್ ಮಾಡಿದ್ದಾರೆ.
ಇದೇ ಟ್ವೀಟ್ ಸ್ಕ್ರೀ ಶಾಟ್ ಇಟ್ಟುಕೊಂಡು ಅನೇಕರು ಇದನ್ನು ಟ್ರೋಲ್ ಮಾಡಿದ್ದಾರೆ. ಕೆಲವರು ಮದ್ವೆ ಆದ ದಿನಾನೇ ಮಕ್ಕಳು ಮಾಡೋಕೆ ಆಗುತ್ತಾ ಅಂತಾ ಕಮೆಂಟ್ ಮಾಡಿದ್ದಾರೆ.
- Advertisement -