ಉಡುಪಿ: ಮೊನ್ನೆ ಉಡುಪಿ ವಿಧಾನಸಭೆ ಕ್ಷೇತ್ರದ ಟಿಕೆಟ್ ಮಿಸ್ ಆಗಿದ್ದಕ್ಕೆ ಬೇಸರ ಮಾಡಿಕೊಂಡಿದ್ದ ಶಾಸಕ ರಘುಪತಿ ಭಟ್ ನಿನ್ನೆ ಎಲ್ಲವನ್ನು ಮರೆತು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಅಷ್ಟ ಅಲ್ಲ ಯಶ್ ಪಾಲ್ ಸುವರ್ಣ ಅವರ ಚುನಾವಣೆಗೆ ಇಂದಿನಿಂದಲೇ ಪ್ರಚಾರದಲ್ಲಿ ಭಾಗವಹಿಸಲಿದ್ದೇನೆ ಎಂದಿದ್ದಾರೆ.
ತಮ್ಮ ಅಸಮಧಾನವನ್ನು ಬದಿಗಿಟ್ಟು ನಿನ್ನೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ರಘುಪತಿ ಭಟ್ ಯಶ್ ಪಾಲ್ ಸುವರ್ಣ ಅವರನ್ನು ಈ ಬಾರಿ 50 ರಿಂದ 60 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣಗೆ ಸಂಪೂರ್ಣ ಬೆಂಬಲ ಕೊಟ್ಟು ಇಂದಿನಿಂದಲೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇನೆ ಎಂದ ಅವರು ಟಿಕೆಟ್ ಇಲ್ಲ ಎಂಬ ನೋವಿನಿಂದ ಹೊರಗೆ ಬಂದಿದ್ದೇನೆ, ಸಾಮಾಜಿಕ ಜಾಲತಾಣದಲ್ಲಿ ಬೆಂಬಲಗರ ಪೋಸ್ಟ್ ಗಳಿಗೆ ಉತ್ತರ ನೀಡಿದ ರಘುಪತಿ ಭಟ್ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಇಂದಿಗೇ ನಿಲ್ಲಿಸಬೇಕು, ಕೇವಲ ಅಭ್ಯರ್ಥಿ, ಬಿಜೆಪಿ ಪಕ್ಷದ ಪರ ಮಾತ್ರ ಪ್ರಚಾರ ಮಾಡಬೇಕು ಎಂದು ತಮ್ಮ ಅಭಿಮಾನಿಗಳು ಕಾರ್ಯಕರ್ತರಿಗೆ ರಘುಪತಿ ಭಟ್ ಸೂಚನೆ ನೀಡಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ನನಗೆ ಕರೆ ಮಾಡಿದ್ದರು, ಪಕ್ಷ ಕೊಟ್ಟ ಅಭ್ಯರ್ಥಿಯ ಜೊತೆ ಕೆಲಸ ಮಾಡುವ ಎರಡನೇ ಅವಕಾಶ ಸಿಕ್ಕಿದೆ. ನಾನು ಅಭ್ಯರ್ಥಿಯಾದರೆ ಎಷ್ಟು ಸ್ಪೀಡ್ ನಲ್ಲಿ ಕೆಲಸ ಮಾಡುತ್ತೇನೋ ಅದೇ ರೀತಿ ಕೆಲಸ ಮಾಡುತ್ತೇನೆ. ಪಕ್ಷ ನಮಗೆ ಒಳ್ಳೆಯ ಅಭ್ಯರ್ಥಿ ಕೊಟ್ಟಿದ್ದಾರೆ. ಪಕ್ಷ ನನಗೆ ಮೂರು ಬಾರಿ ಶಾಸಕನಾಗುವ ಅವಕಾಶ ಕೊಟ್ಟಿದೆ. ಸಾಮಾನ್ಯ ಕುಟುಂಬದಿಂದ ಬಂದವ ಮೂರು ಬಾರಿ ಶಾಸಕನಾಗಿದ್ದು ದೊಡ್ಡ ವಿಷಯ ಎಂದಿದ್ದಾರೆ. ಇನ್ನು ಅಸಾಮಾಧಾನಗೊಂಡು ಪಕ್ಷ ಬಿಡುವವರ ಮಧ್ಯೆ ರಘುಪತಿ ಬಟ್ ಸಕಾರಾತ್ಮಕ ನಡೆಯ ಮೂಲಕ ಎಲ್ಲರ ಮೆಚ್ಚುಗೆ ಪಡೆದಿದ್ದಾರೆ.