ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ ಅವರು ತಾಲ್ಲೂಕಿನಾದ್ಯಾಂದ ಸಂಘಟನಾತ್ಮಕ ಪ್ರವಾಸ ಕೈಗೊಂಡಿದ್ದು, ಬಿಜೆಪಿ ಮಂಡಲ ಪದಾಧಿಕಾರಿಗಳೊಂದಿಗೆ ದಿನಾಂಕ 12.04.2023 ರಿಂದ 15.04.2023 ರವರೆಗೆ ಕ್ಷೇತ್ರದ ಎಲ್ಲಾ 81 ಗ್ರಾಮಗಳಿಗೆ ಭೇಟಿ ನೀಡಿದ್ದಾರೆ.
ನಾರಾವಿ ಶ್ರೀಸೂರ್ಯನಾರಾಯಣ ದೇವರಿಗೆ ಕೈಮುಗಿದು, ತೀರ್ಥಪ್ರಸಾದ ಸ್ವೀಕರಿಸಿ ನಾರಾವಿ ಶಕ್ತಿಕೇಂದ್ರದಿಂದಲೇ ಪ್ರವಾಸ ಆರಂಭಿಸಿ ಕುತ್ಲೂರು, ಸುಲ್ಕೇರಿ, ಕೊಕ್ರಾಡಿ, ಅಂಡಿಂಜೆ, ಸಾವ್ಯ, ಪೆರಾಡಿ, ಮರೋಡಿ, ಕಾಶಿಪಟ್ಣ, ಬಡಕೊಡಿ, ಹೊಸಂಗಡಿ, ಆರಂಬೋಡಿ, ವೇಣೂರು, ಕರಿಮಣೇಲು, ಮೂಡುಕೋಡಿ, ಕುಕ್ಕೇಡಿ, ನಿಟ್ಟಡೆ, ಗರ್ಡಾಡಿ, ಪಿಲ್ಯ, ಕುದ್ಯಾಡಿ, ನಾವರ, ಪಡಂಗಡಿ, ನಾಲ್ಕೂರು, ಬಜಿರೆ, ತೆಂಕಕಾರಂದೂರು, ಬಡಗಕಾರಂದೂರು ಶಕ್ತಿಕೇಂದ್ರಗಳ ಸಭೆನಡೆಸಿದರು.
ದಿನಾಂಕ 13.04.2023 ರಂದುಶಿಬಾಜೆ, ಅರಸಿನಮಕ್ಕಿ, ಶಿಶಿಲಾ, ರೆಖ್ಯಾ, ಗುಂಡೂರಿ, ಪಟ್ರಮೆ, ಕೊಕ್ಕಡ, ಕಳೆಂಜ, ನಿಡ್ಲೆ, ಪುದುವೆಟ್ಟು , ನೆರಿಯ, ಚಿಬಿದ್ರೆತೊಟತ್ತಾಡಿ, ಚಾರ್ಮಾಡಿ, ಮುಂಡಾಜೆ, ಉಜಿರೆ, ಕಲ್ಮಂಜ, ಕಡಿರುದ್ಯಾವರ, ಮಿತ್ತಬಾಗಿಲು , ಮಲವಂತಿಗೆ ,ಇಂದಬೆಟ್ಟು, ನಾವೂರು ಶಕ್ತಿಕೇಂದ್ರಗಳ ಸಭೆ ನಡೆಸಿದರು.
ದಿನಾಂಕ 14.04.2023 ರಂದುಸೋಣಂದೂರು, ಮಾಲಾಡಿ, ಕುಕ್ಕಳ, ನಡ, ಧರ್ಮಸ್ಥಳ, ನಡ, ಕನ್ಯಾಡಿ, ಲಾಯಿಲ, ಕೊಯ್ಯೂರು, ಬೆಳಾಲು, ಪಾರೆಂಕಿ, ಮಚ್ಚಿನ, ತಣ್ಣೀರುಪಂಥ, ಪುತ್ತಿಲ, ಬಾರ್ಯ, ತೆಕ್ಕಾರು, ಇಳಂತಿಲ, ಮೊಗ್ರು, ಬಂದಾರು, ಉರುವಾಲು, ಕಣಿಯೂರು, ನ್ಯಾಯತರ್ಪು, ಕಳಿಯ, ಓಡಿಲ್ನಾಳ, ಕುವೆಟ್ಟು, ಮೇಲಂತಬೆಟ್ಟು, ಸವಣಾಲು, ಶಿರ್ಲಾಲು, ಕರಂಬಾರು, ಸುಲ್ಕೇರಿಮೊಗ್ರು, ಮುಂಡೂರು ಶಕ್ತಿಕೇಂದ್ರಗಳ ಸಭೆ ನಡೆಸಿದರು.
ಇಂದುದಿನಾಂಕ 15.04.2023 ರಂದು ಬೆಳ್ತಂಗಡಿನಗರ ಶಕ್ತಿಕೇಂದ್ರದ ಸಭೆ ನಡೆಸುವ ಮೂಲಕ, ಅಭ್ಯರ್ಥಿ ಘೋಷಣೆಯಾದ ಕೇವಲ 4 ದಿನದಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮಗಳನ್ನು ಸಂಪರ್ಕಿಸಿದಂತಾಗಿದೆ. 4 ದಿನಗಳ ಅಂತರದಲ್ಲಿ ಬೆಳ್ತಂಗಡಿ ಕ್ಷೇತ್ರದ ಮೂಲೆ ಮೂಲೆಗಳನ್ನೂ ತಲುಪಿದ್ದು ಮಾತ್ರವಲ್ಲದೆ, ಸಭೆ ನಡೆಸಿ ಪಕ್ಷದ ಚಟುವಟಿಕೆಗಳಿಗೆ ವೇಗ ತುಂಬಿದ್ದೂ ಕೂಡಾ ವಿಶೇಷ. ಬೆಳಗ್ಗೆ 7 ಗಂಟೆಯಿಂದ ಆರಂಭಿಸಿ ತಡರಾತ್ರಿ 11 ರವರೆಗೆ ಗ್ರಾಮಸಂಪರ್ಕ ಮಾಡುವ ಮೂಲಕ ಬಿರುಸಿನ ಪ್ರಚಾರ ಮಾಡಿದ್ದಾರೆ.
ಶಕ್ತಿಕೇಂದ್ರಗಳ ಪ್ರವಾಸದಲ್ಲಿ ಪಕ್ಷವನ್ನು ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಪ್ರವಾಸದಾದ್ಯಂತ ಅನ್ಯಪಕ್ಷಗಳ ಅನೇಕ ಕಾರ್ಯಕರ್ತರು, ನಾಯಕರು ಶಾಸಕ ಹರೀಶ್ ಪೂಂಜ ಅವರು ನಡೆಸಿದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ಬಿಜೆಪಿ ಪಕ್ಷದ ತತ್ವಸಿದ್ಧಾಂತಗಳನ್ನು ಒಪ್ಪಿ ಬಿಜೆಪಿಗೆ ಸೇರ್ಪಡೆಗೊಂಡರು. ಬಡಕೋಡಿ ಗ್ರಾಮದ ರವಿನಾಯ್ಕ್, ಮೂಡುಕೋಡಿ ಗ್ರಾಮದ ಜಯರಾಮ್, ಸುಧಾಕರ್ ಅವರನ್ನು ಹರೀಶ್ ಪೂಂಜಾ ಅವರು ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಅವರೊಂದಿಗೆ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.
ಶಕ್ತಿಕೇಂದ್ರಗಳ ಸಭೆಯಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಬಿಜೆಪಿ ದಕ ಜಿಲ್ಲಾ ಉಪಾಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಕೊರಗಪ್ಪ ನಾಯ್ಕ್, ಜಿಲ್ಲಾ ಎಸ್. ಟಿ. ಮೋರ್ಚಾ ಅಧ್ಯಕ್ಷರಾದ ಚೆನ್ನಕೇಶವ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾಅಧ್ಯಕ್ಷರಾದ ಜೋಯಲ್ಮೆಂಡೋನ್ಸ, ಮಂಡಲದ ಪ್ರಧಾನಕಾರ್ಯದರ್ಶಿಗಳಾದ ಶ್ರೀನಿವಾಸ್ರಾವ್, ಗಣೇಶ್ ನಾವೂರು, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ಕೊರಗಪ್ಪ ಗೌಡ ಹಾಗೂ ಪಕ್ಷದ ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ, ಬೂತ್ ಮಟ್ಟದ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.