Friday, June 27, 2025
Homeಕರಾವಳಿಮಂಗಳೂರು ; ಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ತೆರಳುವವರಿಗೆ ಪಾರ್ಕಿಂಗ್ ವ್ಯವಸ್ಥೆಯ ಮಾಹಿತಿ ಇಲ್ಲಿದೆ...

ಮಂಗಳೂರು ; ಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ತೆರಳುವವರಿಗೆ ಪಾರ್ಕಿಂಗ್ ವ್ಯವಸ್ಥೆಯ ಮಾಹಿತಿ ಇಲ್ಲಿದೆ…

spot_img
- Advertisement -
- Advertisement -

ಮಂಗಳೂರು: ದ.ಕ.ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಇಂದು ಸುರತ್ಕಲ್ ಸಮೀಪದ ಎನ್‌ಐಟಿಕೆ ಆವರಣದಲ್ಲಿ ನಡೆಯಲಿದೆ. ಈ ಕೇಂದ್ರಕ್ಕೆ ತೆರಳುವ ಸಾರ್ವಜನಿಕರು, ಸರಕಾರಿ ಅಧಿಕಾರಿ ಮತ್ತು ಸಿಬ್ಬಂದಿಯ ವಾಹನಗಳನ್ನು ನಿಲುಗಡೆ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಮಂಗಳೂರು ಕಡೆಯಿಂದ ಮತ ಎಣಿಕೆ ಕೇಂದ್ರಕ್ಕೆ ಬರುವ ಸಾರ್ವಜನಿಕರು ಎನ್.ಐ.ಟಿ.ಕೆ ಜಂಕ್ಷನ್ ಬಳಿಯಲ್ಲಿ ಎಡಕ್ಕೆ ತಿರುಗಿ ಎನ್.ಐ.ಟಿ.ಕೆ ಕ್ಯಾಂಪಸ್‌ನ ಅಂಡರ್‌ ಪಾಸ್ ಮುಖಾಂತರ ನಾಲ್ಕು ಚಕ್ರ ವಾಹನಗಳನ್ನು ನಿಲುಗಡೆ ಮಾಡಲು ವ್ಯವಸ್ಥೆ ಮಾಡಲಾಗಿರುವ ಎನ್.ಐ.ಟಿ.ಕೆ. ವಸತಿಗೃಹದ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ತಮ್ಮ ವಾಹನಗಳನ್ನು ನಿಲುಗಡೆ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಅದೇ ರೀತಿ ದ್ವಿ-ಚಕ್ರ ವಾಹನಗಳನ್ನು ಎನ್.ಐ.ಟಿ.ಕೆ. ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ಮೈದಾನದಲ್ಲಿ ನಿಲುಗಡೆ ಮಾಡುವುದು ಅಥವಾ ಸುರತ್ಕಲ್ ಸುಪ್ರೀಂ ಮಹಲ್ ಸಮುದಾಯ ಭವನದ ಬಳಿ ರಾಷ್ಟ್ರೀಯ ಹೆದ್ದಾರಿಯಿಂದ ಎಡಬದಿಯ ತಡಂಬೈಲ್ ಸದಾಶಿವ ಮಹಾ ಗಣಪತಿ ದೇವಸ್ಥಾನ ರಸ್ತೆಯಲ್ಲಿ ಸಾಗಿ ನಿಗದಿಪಡಿಸಲಾದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಬೇಕು.

ಮುಲ್ಕಿ ಕಡೆಯಿಂದ ಮತ ಎಣಿಕೆ ಕೇಂದ್ರಕ್ಕೆ ಬರುವ ಸಾರ್ವಜನಿಕರು ಎನ್.ಐ.ಟಿ.ಕೆ. ಜಂಕ್ಷನ್ ಬಳಿಯಲ್ಲಿ ಬಲಕ್ಕೆ ತಿರುಗಿ ಎನ್.ಐ.ಟಿ.ಕೆ. ಕ್ಯಾಂಪಸ್‌ನ ಆಂಡರ್‌ಪಾಸ್ ಮುಖಾಂತರ ನಾಲ್ಕು ಚಕ್ರ ವಾಹನಗಳನ್ನು ನಿಲುಗಡೆ ಮಾಡಲು ವ್ಯವಸ್ಥೆ ಮಾಡಲಾಗಿರುವ ಎನ್.ಐ.ಟಿ.ಕೆ. ವಸತಿಗೃಹದ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ತಮ್ಮ ವಾಹನಗಳನ್ನು ನಿಲುಗಡೆ ಮಾಡುವುದು. ದ್ವಿ-ಚಕ್ರ ವಾಹನಗಳನ್ನು ಎನ್.ಐ.ಟಿ.ಕೆ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಮೈದಾನದಲ್ಲಿ ನಿಲುಗಡೆ ಮಾಡುವುದು. ಅಥವಾ ರಾಷ್ಟ್ರೀಯ ಹೆದ್ದಾರಿಯ ಸುಪ್ರಿಂ ಮಹಲ್ ಸಮುದಾಯ ಭವನ ಬಳಿ ಯು-ಟರ್ನ್ ಮಾಡಿ ಎಡಬದಿಯ ತಡಂಬೈಲ್ ಸದಾಶಿವ ಮಹಾ ಗಣಪತಿ ದೇವಸ್ಥಾನ ರಸ್ತೆಯಲ್ಲಿ ಸಾಗಿ ನಿಗದಿಪಡಿಸಲಾದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡಬೇಕು.ಮತ ಎಣಿಕೆ ಕರ್ತವ್ಯಕ್ಕೆ ಬರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಎನ್.ಐ.ಟಿ.ಕೆ. ಯ ಮುಖ್ಯ ದ್ವಾರದ ಮೂಲಕ ಒಳ ಪ್ರವೇಶಿಸಿ ಎನ್.ಐ.ಟಿ.ಕೆ ಫುಟ್‌ಬಾಲ್ ಮೈದಾನದಲ್ಲಿ ವಾಹನಗಳನ್ನು ನಿಲುಗಡೆ ಮಾಡಲು ತಿಳಿಸಲಾಗಿದೆ.

ವಾಹನ ನಿಲುಗಡೆ ನಿಷೇದಿತ ಸ್ಥಳಗಳು

ರಾಷ್ಟ್ರೀಯ ಹೆದ್ದಾರಿ-65 ರ ಎನ್.ಐ.ಟಿ.ಕೆ ಸಮೀಪದ ಸುಪ್ರೀಂ ಮಹಲ್ ಸಮುದಾಯ ಭವನದಿಂದ ಟೋಲ್ ಗೇಟ್‌ವರೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಸರ್ವಿಸ್ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆಯನ್ನು ಬೆಳಗ್ಗೆ 6 ಗಂಟೆಯಿಂದ ಮತ ಎಣಿಕೆ ಕಾರ್ಯ ಮುಗಿಯುವವರೆಗೆ ಸಂಪೂರ್ಣ ನಿಷೇಧಿಸಲಾಗಿದೆ.

ಇನ್ನು  ಮತ ಎಣಿಕೆ ಕೇಂದ್ರಕ್ಕೆ ಸಾಕಷ್ಟು ಸಾರ್ವಜನಿಕರು ಆಗಮಿಸುವ ಕಾರಣದಿಂದಾಗಿ ಎನ್.ಐ.ಟಿ.ಕೆ.ಯ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಗಳಿದ್ದು, ಉಡುಪಿ ಹಾಗೂ ಮಂಗಳೂರು ಕಡೆಗಳಿಗೆ ಸಂಚರಿಸುವ ಸಾರ್ವಜನಿಕರು ಪರ್ಯಾಯ ರಸ್ತೆಯಲ್ಲಿ ಸಂಚರಿಸಲು ಸೂಚಿಸಲಾಗಿದೆ.

- Advertisement -
spot_img

Latest News

error: Content is protected !!