Thursday, June 4, 2026
Homeಕರಾವಳಿಉಡುಪಿಉಡುಪಿ: ಕುಡಿಯುವ ನೀರಿಗೆ ಸಮಸ್ಯೆ; ಖಾಲಿ ಕೊಡಗಳೊಂದಿಗೆ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರ ಮುತ್ತಿಗೆ

ಉಡುಪಿ: ಕುಡಿಯುವ ನೀರಿಗೆ ಸಮಸ್ಯೆ; ಖಾಲಿ ಕೊಡಗಳೊಂದಿಗೆ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರ ಮುತ್ತಿಗೆ

- Advertisement -
- Advertisement -

ಉಡುಪಿ: ಕಳೆದೆರಡು ತಿಂಗಳಿನಿಂದ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗದ ಕಾರಣ ಮಹಿಳೆಯರು ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯತ್‌ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ಅಂಬಲಪಾಡಿ ಪಂಚಾಯತ್ ಕಚೇರಿಯಲ್ಲಿ ನಡೆದಿದೆ..

ಗ್ರಾಮ ಪಂಚಾಯತ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಕೂಡಲೇ ಸಮಸ್ಯೆ ಬಗೆಹರಿಸಿ. ಇಲ್ಲದಿದ್ರೆ ಕಚೇರಿಗೆ ಬೀಗ ಹಾಕಿ ಎಂದು ಆಗ್ರಹಿಸಿದ್ರು. ಜೊತೆಗೆ ಕಚೇರಿ ಸಿಬ್ಬಂದಿಯನ್ನೂ ತರಾಟೆಗೆ ತೆಗೆದುಕೊಂಡ್ರು. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯತ್‌ ಅಧ್ಯಕ್ಷರ ಜೊತೆಗೆ ಗ್ರಾಮಸ್ಥರು ವಾಗ್ವಾದಕ್ಕಿಳಿದ್ರು. ನಂತರ ಮೂರು ದಿನಕ್ಕೊಮ್ಮೆ ನೀರು ಪೂರೈಕೆ ಮಾಡುವುದಾಗಿ ಅಧ್ಯಕ್ಷರು ಭರವಸೆ ನೀಡಿದ ನಂತರ ಗ್ರಾಮಸ್ಥರು ಧರಣಿ ಕೈಬಿಟ್ಟರು.

- Advertisement -

Latest News

error: Content is protected !!